Wednesday, August 5, 2026
spot_img
More
    spot_img
    HomeLatest newsನಾಯಕತ್ವ ಬದಲಾವಣೆ ಎಂಬುದು ಡ್ರಾಮಾ ಕಂಪನಿ ಎಂದ ಪರಮೇಶ್ವರ್‌

    ನಾಯಕತ್ವ ಬದಲಾವಣೆ ಎಂಬುದು ಡ್ರಾಮಾ ಕಂಪನಿ ಎಂದ ಪರಮೇಶ್ವರ್‌

    ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ ಚರ್ಚೆಗಳು ಪದೇಪದೇ ವರದಿಯಾಗುತ್ತಿವೆ. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದೆಲ್ಲವೂ ಕಪೋಲ ಕಲ್ಪಿತ. ನಾನು ಅದೇ ರೀತಿಯ ಹೇಳಿಕೆಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದರು.

    ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

    ಇನ್ನು ಸರ್ಕಾರಿ ಹುದ್ದೆಗಳಲ್ಲಿ ಜನತಾ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ತಮ್ಮ ಬಳಿ ಯಾರೂ ಚರ್ಚೆ ಮಾಡಿಲ್ಲ. ಆ ರೀತಿ ಯಾರಾದರೂ ಮನವಿ ಕೊಟ್ಟರೆ ಪರಿಶೀಲನೆ ಮಾಡುತ್ತೇವೆ. ಸದ್ಯದ ಮಟ್ಟಿಗೆ ಒಳ ಮೀಸಲಾತಿ ಕಾರಣಕ್ಕಾಗಿ ಸರ್ಕಾರಿ ನೇಮಕಾತಿಗಳನ್ನು ತಡೆಹಿಡಿಯಲಾಗಿದೆ. ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ನೀಡಬೇಕಾಗುತ್ತದೆ. ಒಳಮೀಸಲಾತಿಯ ವಿವಾದ ಇತ್ಯರ್ಥವಾದ ಬಳಿಕ ನೇಮಕಾತಿಗಳು ನಡೆಯಲಿವೆ ಎಂದರು.

    ಇನ್ನು ಮಂಗಳೂರಿನಲ್ಲಿ ಶಾಂತಿ ಸಭೆಯನ್ನು ನಡೆಸಿದ್ದೇವೆ. ಆ ಭಾಗದಲ್ಲಿ ಇತ್ತೀಚೆಗೆ ಕೊಲೆಗಳಾಗಿದ್ದವು. ಅದಕ್ಕಾಗಿ ಕೋಮು ನಿಗ್ರಹ ದಳ ರಚಿಸಿದ್ದೇವೆ. ಶಾಂತಿ ಸಭೆ ನಡೆಸಬೇಕು ಎಂಬ ಸಲಹೆ ಕೂಡ ಕೇಳಿಬಂದಿತ್ತು. ಅದರಂತೆ ನಿನ್ನೆ ಶಾಸಕರು, ಸಂಸದರು ಹಾಗೂ ಧಾರ್ಮಿಕ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಉತ್ತಮ ಸಲಹೆಗಳು ಬಂದಿವೆ. ಮತ್ತೊಮ್ಮೆ ದೊಡ್ಡ ಸಭೆ ನಡೆಸುವುದಾಗಿ ಹೇಳಿದರು.

    ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡುವುದನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ಕಾನೂನು ರೂಪಿಸಲಾಗುವುದು. ಕರಾವಳಿ ಕಲೆ, ಸಂಸ್ಕೃತಿ ರಕ್ಷಣೆಯಾಗಬೇಕು. ಶಾಂತಿ ನೆಲೆಸಬೇಕು. ಕೋಮು ಸೂಕ್ಷ್ಮ ಜಿಲ್ಲೆ ಎಂದು ಕರೆಯಬೇಡಿ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಮಾದಕವಸ್ತುಗಳ ಹಾವಳಿ, ಮರಳು ಗಣಿಗಾರಿಕೆ, ಕೆಂಪು ಕಲ್ಲು ಮಾಫಿಯಾ ದಂಧೆಯ ಬಗ್ಗೆಯೂ ಚರ್ಚೆಯಾಗಿದೆ. ಪೊಲೀಸ್ ಅಧಿಕಾರಿಗಳಿಗೆ ಈ ವಿಷಯವಾಗಿ ಅಗತ್ಯ ಸಲಹೆ ಸೂಚನೆಯನ್ನು ನೀಡಿದ್ದೇವೆ ಎಂದರು.

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading