Friday, September 4, 2026
spot_img
More
    spot_img
    HomeStateಇಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

    ಇಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

    ಮೆಟ್ರೋದ ಯೆಲ್ಲೋ ಲೈನ್‌ ಮಾರ್ಗದ ಉದ್ಘಾಟನೆಗೆ ಭಾನುವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ಪ್ರಮುಖ ರಸ್ತೆಗಳಲ್ಲಿ ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೆಲವು ರಸ್ತೆಯಲ್ಲಿ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:30 ರವರೆಗೆ ಈ ನಿರ್ಬಂಧ ಹೇರಲಾಗಿದೆ.

    Advertisement

    ಪ್ರಧಾನಿ ಬೆಂಗಳೂರು ಭೇಟಿಯ ಅಧಿಕೃತ ವೇಳಾಪಟ್ಟಿಯು ಪ್ರಕಟವಾಗಿದ್ದು, ಬೆಂಗಳೂರಿನಲ್ಲಿ 4 ಗಂಟೆ ಇರಲಿದ್ದಾರೆ. ಈ ಸಂದರ್ಭದಲ್ಲಿ 3 ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 1 ಮೆಟ್ರೋ ಮಾರ್ಗ, 3 ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಿದ್ದಾರೆ. ನಮ್ಮ ಮೆಟ್ರೋ 3 ನೇ ಹಂತದ 2 ಕಾರಿಡಾರ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ನಿರ್ಬಂಧಿತ ರಸ್ತೆಗಳು
    ಮಾರೇನಹಳ್ಳಿ ರಾಜಲಕ್ಷ್ಮೀ ಜಂಕ್ಷನ್‌ನಿಂದ 18ನೇ ಮುಖ್ಯ ರಸ್ತೆ
    ಈಸ್ಟ್ ಎಂಡ್ ಜಂಕ್ಷನ್‌ನಿಂದ ಅರವಿಂದ ಜಂಕ್ಷನ್
    ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ (ಹೊಸೂರು ಕಡೆಯಿಂದ ನಗರದ ಕಡೆಗೆ)
    ಇನ್‌ಫೋಸಿಸ್ ಅವೆನ್ಯೂ ಮತ್ತು ವೇಲಾಂಕಣಿ ರಸ್ತೆಗಳು.


    ಪರ್ಯಾಯ ಮಾರ್ಗಗಳು
    ಮಾರೇನಹಳ್ಳಿ ರಾಜಲಕ್ಷ್ಮೀ ಜಂಕ್ಷನ್‌ನಿಂದ ಜಯದೇವ ಕಡೆಗೆ ಸಾಗುವ ವಾಹನಗಳು: ಬನಶಂಕರಿ ಬಸ್ ನಿಲ್ದಾಣ, ಸಾರಕ್ಕಿ ಮಾರುಕಟ್ಟೆ, ಆರ್.ವಿ. ಡೆಂಟಲ್ ಜಂಕ್ಷನ್ ಅಥವಾ ಸಾರಕ್ಕಿ ಜಂಕ್ಷನ್ ಔಟರ್ ರಿಂಗ್ ರಸ್ತೆ ಮೂಲಕ ಬನ್ನೇರುಘಟ್ಟ ರಸ್ತೆಯ ಕಡೆಗೆ ಸಾಗಬಹುದು.


    ಈಸ್ಟ್ ಎಂಡ್ ಸರ್ಕಲ್‌ನಿಂದ ಬನಶಂಕರಿ ಕಡೆಗೆ ಸಾಗುವ ವಾಹನಗಳು: 28ನೇ ಮುಖ್ಯ ರಸ್ತೆ, 9ನೇ ಕ್ರಾಸ್ ಜಂಕ್ಷನ್, ಡಾಲಿಯಾ ಜಂಕ್ಷನ್, ಅಥವಾ ಔಟರ್ ರಿಂಗ್ ರಸ್ತೆ ಮೂಲಕ ಸಾರಕ್ಕಿ ಜಂಕ್ಷನ್, ಕನಕಪುರ ರಸ್ತೆ ಮತ್ತು ಬನಶಂಕರಿ ಕಡೆಗೆ ಸಾಗಬಹುದು.


    ಹೊಸೂರು ರಸ್ತೆಯಿಂದ ಇತರ ಕಡೆಗೆ ಹೋಗುವವರು: ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ಕಡೆಗೆ ಹೋಗಲು ನೈಸ್ (NICE) ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

    ನೈಸ್ ರಸ್ತೆಯಿಂದ ಬರುವ ವಾಹನಗಳು: ಬನ್ನೇರುಘಟ್ಟ ಜಂಕ್ಷನ್, ಜಿಗಣಿ ರಸ್ತೆ, ಬೊಮ್ಮಸಂದ್ರ ಜಂಕ್ಷನ್ ಮೂಲಕ ಹೊಸೂರು ರಸ್ತೆಗೆ ಸೇರಬಹುದು
    ಈ ಕ್ರಮಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸದಂತೆ ನೋಡಿಕೊಳ್ಳಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
    ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ವಾಹನ ಸವಾರರು ಈ ಸಂಚಾರ ಬದಲಾವಣೆಗಳನ್ನು ಗಮನಿಸಿ ಸಹಕರಿಸಬೇಕೆಂದು ಎಂದು ಬೆಂಗಳೂರು ಸಂಚಾರ ಪೊಲೀಸ್‌ ಪ್ರಕಟನೆ ತಿಳಿಸಿದೆ.

    ,ಕಾಂತಾರ ಚಿತ್ರದಲ್ಲಿದ್ದ ಕೋಣ ಇನ್ನಿಲ್ಲ ; ಈ ಕೋಣದ ಸಾಧನೆ ಒಂದೆರಡಲ್ಲ !


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading