ಬೀದರ್ನ ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದಲ್ಲಿ 2017-19ರ ಅವಧಿಯಲ್ಲಿ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಆಘಾತ ನೀಡಿದ್ದಾರೆ. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ, ಲೋಕಾಯುಕ್ತದ 69 ತಂಡಗಳು ಕರ್ನಾಟಕದ 69 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿವೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಈ ದಾಳಿ ನಡೆದಿವೆ. ಸದ್ಯ, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಎಲ್ಲೆಲ್ಲಿ ಲೋಕಾಯುಕ್ತ ದಾಳಿ?
ವಿವಿಧ ವರದಿ ಪ್ರಕಾರ, 2021 ರಲ್ಲಿ ನೀಡಲಾದ ದೂರು ತನಿಖೆಯ ವೇಳೆ ಸುಮಾರು 28 ಕೋಟಿ ರೂ. ಅವ್ಯವಹಾರ ಪತ್ತೆಯಾಗಿದ್ದು, ಪೀಠೋಪಕರಣ ಮತ್ತು ಸ್ಟೇಷನರಿ ಖರೀದಿಯಲ್ಲಿ ಅಕ್ರಮ ಪ್ರಕ್ರಿಯೆ ನಡೆದಿರುವುದು ದೃಢವಾಗಿದೆ. ಬೆಂಗಳೂರು, ಬೀದರ್, ಉಡುಪಿ, ಚಿಕ್ಕಮಗಳೂರು, ಕೊಪ್ಪಳ, ಹಾಸನ, ರಾಮನಗರ, ಕೋಲಾರ ಸೇರಿದಂತೆ ರಾಜ್ಯಾದ್ಯಂತ 69 ಸ್ಥಳಗಳಲ್ಲಿ 67 ತಂಡಗಳಿಂದ ದಾಳಿ ನಡೆಸಲಾಗಿದೆ.
ಚಿಕ್ಕಮಗಳೂರಿನಲ್ಲಿಯೂ ಲೋಕಾಯುಕ್ತ ದಾಳಿ
ಬೀದರ್ನ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ, ವಿಶ್ವವಿದ್ಯಾಲಯದ ಮಾಜಿ ಕಂಟ್ರೋಲರ್ ಸುರೇಶ್ ಅವರ ಸಹೋದರ ಮಲ್ಲಿಕಾರ್ಜುನ್ ಅವರ ಚಿಕ್ಕಮಗಳೂರು ನಗರದ ನಿವಾಸದ ಮೇಲೆ ದಾಳಿ ನಡೆದಿದೆ. ಸುರೇಶ್ ಅವರು 2017ರಲ್ಲಿ ಬೀದರ್ ವಿಶ್ವವಿದ್ಯಾಲಯದಲ್ಲಿ ಕಂಟ್ರೋಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಅನೈತಿಕ ಸಂಬಂಧಕ್ಕೆ ಅಡ್ಡಿ: ಮಗಳನ್ನೇ ಕೊಲೆ ಮಾಡಿದ ತಾಯಿ-ಪ್ರಿಯಕರ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


