Saturday, August 8, 2026
spot_img
More
    spot_img
    HomeTop Storyಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ವಿಸ್ತರಿಸುವಂತೆ ಪ್ರಧಾನಿಗೆ ಜಗದೀಶ್‌ ಶೆಟ್ಟರ್‌ ಮನವಿ

    ಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ವಿಸ್ತರಿಸುವಂತೆ ಪ್ರಧಾನಿಗೆ ಜಗದೀಶ್‌ ಶೆಟ್ಟರ್‌ ಮನವಿ

    ನವದೆಹಲಿ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

    Advertisement

    ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂಸದ ಜಗದೀಶ್‌ ಶೆಟ್ಟರ್‌ ಅವರು, ಹುಬ್ಬಳ್ಳಿ ಸಾಹಿತ್ಯ ಭಂಡಾರ ಪ್ರಕಟಿಸಿದ “ಟೆಂಪಲ್ ಟ್ರೆಷರ್ಸ್: ಎ ಜರ್ನಿ ಥ್ರೂ ಟೈಮ್” ಪುಸ್ತಕವನ್ನು ನೀಡಿ, ಹೊಸ ವರ್ಷದ ಶುಭಾಶಯ ತಿಳಿಸಿದರು.

    ಬಳಿಕ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯೆಲ್ಲಮ್ಮ ದೇವಾಲಯದ ಪುನರಾಭಿವೃದ್ಧಿಗಾಗಿ ₹100 ಕೋಟಿ ಮಹತ್ವದ ನಿಧಿಯನ್ನು ಘೋಷಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ರಾಮದುರ್ಗದ ಐತಿಹಾಸಿಕ ಶಬರಿ ಕೊಲ್ಲದ ಅಭಿವೃದ್ಧಿಗೆ ಬೆಂಬಲ ಕೋರಿದರು.

    ಹೆಚ್ಚುವರಿಯಾಗಿ, ಬೆಳಗಾವಿ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯನ್ನು ಪೂರೈಸುವ ಮೂಲಕ ಬೆಂಗಳೂರು ಮತ್ತು ಧಾರವಾಡದ ನಡುವೆ ಪ್ರಸ್ತುತ ಓಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಗೆ ವಿಸ್ತರಿಸುವಂತೆ ಮನವಿ ಮಾಡಿದರು.

    ಇದಲ್ಲದೆ, ಬೆಳಗಾವಿ ಮತ್ತು ಇತರ ಟೈಯರ್-2 ನಗರಗಳಿಗೆ ವಿಮಾನ ಪ್ರಯಾಣ ಸಂಪರ್ಕವನ್ನು ಸುಧಾರಿಸಲು ಉಡಾನ್ 3.0 ಯೋಜನೆಯ ಪ್ರಯೋಜನಗಳನ್ನು ವಿಸ್ತರಿಸುವಂತೆ ಒತ್ತಾಯಿಸಿದರು.

    ಇದಕ್ಕೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಪ್ರಮುಖ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವಾಲಯಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading