ಬೆಂಗಳೂರು: ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿಯೇ ಕೇಳಿಬರುತ್ತಿದ್ದು, ಈ ಸಾಲಿಗೆ ಇಂದು ಮತ್ತೋರ್ವ ಯುವಕ ಸೇರ್ಪಡೆಯಾಗಿದ್ದಾನೆ.
ಹಾಸನ ಮೂಲದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಲತಃ ಹಾಸನ ಜಿಲ್ಲೆಯ ಹೊಳೆ ನರಸಿಪುರದ ನಿಶಾಂತ್ ಎಂಬ ಯುವಕ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದ.
ಈ ಸಮಯದಲ್ಲಿ ಜೆಪಿ ನಗರದಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ನಿಶಾಂತ್ ಅಲ್ಲಿಯೇ ಹೃದಯಾಘಾತಕ್ಕೊಳಗಾಗಿದ್ದು, ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.
ನಿಶಾಂತ್ ಇನ್ನು ಕಳೆದ 4 ತಿಂಗಳಿನಲ್ಲಿ ಹಾಸನ ಜಿಲ್ಲೆಯ ನಾಲ್ವರು ಹೃದಯಾಘಾತಕ್ಕೆ ಬಲಿಯಾದಂತಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


