Wednesday, September 2, 2026
spot_img
More
    spot_img
    HomeBreaking Newsಕೆ.ಸಿ. ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತದಿಂದ ಜಸ್ಟ್ ಮಿಸ್!

    ಕೆ.ಸಿ. ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತದಿಂದ ಜಸ್ಟ್ ಮಿಸ್!

    Advertisement

    ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ನೂರಾರು ಪ್ರಯಾಣಿಕರು ಇದ್ದ ಏರ್ ಇಂಡಿಯಾ ವಿಮಾನ ಕೂದಲೆಳೆ ಅಂತರದಲ್ಲಿ ಭಾರೀ ದುರಂತದಿಂದ ಪಾರಾಗಿದೆ.

    ಪ್ರತಿಕೂಲ ಹವಾಮಾನದ ನಡುವೆ ತಿರುವನಂತಪುರಂನಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಶಂಕಿತ ತಾಂತ್ರಿಕ ದೋಷ ಕಂಡುಬಂದ ನಂತರ ಚೆನ್ನೈಗೆ ತಿರುಗಿಸಲಾಯಿತು.

    ಏರ್ ಇಂಡಿಯಾ AI2455 ವಿಮಾನ ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿದಿದ್ದು, ವಿಮಾನವನ್ನು ಅಗತ್ಯ ತಪಾಸಣೆಗೆ ಒಳಪಡಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿದೆ.

    ಘಟನೆಯನ್ನು ವಿಮಾನದಲ್ಲಿದ್ದ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು “ದುಃಖಕರ ಪ್ರಯಾಣ” ಎಂದು ತಿಳಿಸಿದ್ದಾರೆ.ತಿರುವನಂತಪುರದಿಂದ ದೆಹಲಿಗೆ ಹೊರಟ ಏರ್ ಇಂಡಿಯಾ ವಿಮಾನ AI 2455 ಇಂದು ದುರಂತದ ಹತ್ತಿರಕ್ಕೆ ಬಂದಿತ್ತು. ನಾನು, ಹಲವಾರು ಸಂಸದರು ಮತ್ತು ನೂರಾರು ಪ್ರಯಾಣಿಕರು ಇದ್ದೆವು. ಟೇಕ್ ಆಫ್ ಆದ ಸುಮಾರು ಒಂದು ಗಂಟೆಯ ನಂತರ ಕ್ಯಾಪ್ಟನ್ ವಿಮಾನ ಸಿಗ್ನಲ್ ದೋಷವನ್ನು ಘೋಷಿಸಿದರು ಮತ್ತು ಚೆನ್ನೈಗೆ ವಿಮಾನ ತಿರುಗಿಸಿದರು. ಸುಮಾರು ಎರಡು ಗಂಟೆಗಳ ಕಾಲ ನಾವು ಇಳಿಯಲು ಅನುಮತಿಗಾಗಿ ಕಾಯುತ್ತಾ ವಿಮಾನ ನಿಲ್ದಾಣವನ್ನು ಸುತ್ತುತ್ತಿದ್ದೆವು.

    ವಿಮಾನವನ್ನು ಪೈಲಟ್ ಚೆನ್ನೈ ಕಡೆಗೆ ತಿರುಗಿಸಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಇಳಿಯುತ್ತಿದ್ದಾಗ ಏರ್ಪೋರ್ಟ್ ನ ಅದೇ ರನ್ ವೇನಲ್ಲಿ ಮತ್ತೊಂದು ವಿಮಾನ ಇತ್ತು. ಇದರಿಂದ ಅತ್ಯಂತ ಕ್ಷೀಪ್ರವಾಗಿ ಪೈಲಟ್ ವಿಮಾನವನ್ನು ಮೇಲಕ್ಕೆ ಎತ್ತಿದ್ದಾರೆ. ಪೈಲೆಟ್ ಸಮಯ ಪ್ರಜ್ಞೆಯಿಂದಾಗಿ ಎಲ್ಲರ ಜೀವ ಉಳಿಸಿದೆ. ಮತ್ತೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

    ಕ್ಯಾಪ್ಟನ್ ಕೌಶಲ್ಯ ಮತ್ತು ಅದೃಷ್ಟದಿಂದ ನಾವು ಪಾರಾಗಿದ್ದೇವೆ. ಪ್ರಯಾಣಿಕರ ಸುರಕ್ಷತೆಯು ಅದೃಷ್ಟವನ್ನು ಅವಲಂಬಿಸಲು ಸಾಧ್ಯವಿಲ್ಲ. ಈ ಘಟನೆಯನ್ನು ತುರ್ತಾಗಿ ತನಿಖೆ ಮಾಡಿ, ಹೊಣೆಗಾರಿಕೆಯನ್ನು ಸರಿಪಡಿಸಿ, ಇಂತಹ ಲೋಪಗಳು ಮತ್ತೆಂದೂ ಸಂಭವಿಸದಂತೆ ನೋಡಿಕೊಳ್ಳಬೇಕೆಂದು ವೇಣುಗೋಪಾಲ್ ಒತ್ತಾಯಿಸಿದ್ದಾರೆ.

    https://x.com/kcvenugopalmp/status/1954611946663383238?ref_src=twsrc%5Etfw%7Ctwcamp%5Etweetembed%7Ctwterm%5E1954611946663383238%7Ctwgr%5E1d163e4b88f6f3935a18882370a4164604f5a7d0%7Ctwcon%5Es1_c10&ref_url=https%3A%2F%2Fapi-news.dailyhunt.in%2F


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading