Wednesday, September 2, 2026
spot_img
More
    spot_img
    HomeLatest news3 ವಾರಗಳ ಮುನ್ನವೇ ಆನ್‌ಲೈನ್‌ನಲ್ಲಿ ದಸರಾ ಟಿಕೆಟ್ ಮಾರಾಟ

    3 ವಾರಗಳ ಮುನ್ನವೇ ಆನ್‌ಲೈನ್‌ನಲ್ಲಿ ದಸರಾ ಟಿಕೆಟ್ ಮಾರಾಟ

    ಮೈಸೂರು: ದಸರಾ ಮಹೋತ್ಸವದ ಕೇಂದ್ರ ಬಿಂದುವಾದ ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಮೂರು ವಾರಗಳ ಮುನ್ನವೇ ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲು ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

    Advertisement

    ಮೈಸೂರು ಅರಮನೆ ಮಂಡಳಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಸರಾ ಮಹೋತ್ಸವದ ಉಪ ಸಮಿತಿ ರಚನೆಗೆ ಒಪ್ಪಿಗೆ ನೀಡಲಾಯಿತು.

    2024ರ ಮೆರವಣಿಗೆ ಉಪ ಸಮಿತಿಗೆ ಅರಮನೆ ಮಂಡಳಿ ವತಿಯಿಂದ 2 ಕೋಟಿ ರೂ. ಅಥವಾ ಅರಣ್ಯ ಇಲಾಖೆಗೆ ನಿರ್ವಹಣೆಗೆ ಬಿಡುಗಡೆಗೊಳಿಸಲಾಗಿರುವ ಅನುದಾನಕ್ಕೆ ಮಂಜೂರಾತಿ ನೀಡಲಾಯಿತು.

    20250 ವಿಜಯ ದಶಮಿ ಕಾರ್ಯಕ್ರಮವು ಅರಮನೆ ಆವರಣದಿಂದಲೇ ಪ್ರಾರಂಭವಾಗುವುದರಿಂದ ಹಾಗೂ ಪೂರ್ವಸಿದ್ಧತಾ ಕಾರ್ಯಗಳು ನಡೆಯುವುದರಿಂದ ಮೆರವಣಿಗೆ ಉಪ ಸಮಿತಿಗೆ ಸಂಬಂಧಿಸಿದ ಕೆಲವು ಪ್ರಮುಖ ವೆಚ್ಚಗಳನ್ನು 2 ಕೋಟಿ ರೂ. ಮಿತಿಗೆ ಒಳಪಟ್ಟು ಅರಮನೆ ಮಂಡಳಿ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಯಿತು.

    ಜಂಬೂಸವಾರಿ, ಪಂಜಿನ ಕವಾಯತು ವೀಕ್ಷಣೆಗೆ ಐದಾರು ದಿನಗಳು ಇರುವಾಗ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟವನ್ನು ಮೂರು ವಾರಗಳ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುವುದು. ಅತಿಥಿ ಗಣ್ಯರು, ಗಣ್ಯರು ಹಾಗೂ ಜನಪ್ರತಿನಿಧಿಗಳಿಗೆ ಪಾಸ್ ವಿತರಿಸಲು ಕ್ರಮವಹಿಸಲು ವಿಶೇಷಾಧಿಕಾರಿಗಳಿಗೆ ಅನುಮತಿ ನೀಡಲು ಅನುಮೋದನೆ ನೀಡಲಾಯಿತು.

    ಕಲಾವಿದರ ಆಯ್ಕೆ ನೋಡಿ ಸ್ಥಳ ನಿಗದಿ: ಕಳೆದ ಬಾರಿ ಯುವ ದಸರಾವನ್ನು ಉತ್ತನಹಳ್ಳಿ ಬಳಿ ಆಯೋಜಿಸಿದ್ದು, ಈ ಬಾರಿ ಖ್ಯಾತನಾಮ ಕಲಾವಿದರ ಆಯ್ಕೆ ನೋಡಿಕೊಂಡು ಸ್ಥಳ ನಿಗದಿಪಡಿಸಲಾಗುತ್ತದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಆಯ್ಕೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ಸ್ಥಳ ನಿಗದಿಪಡಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

    ನಂಜನಗೂಡಿನಲ್ಲಿ ಪುಡಿ ರೌಡಿಗಳ ಸದ್ದು; ಸರ್ಕಾರಿ ಆಸ್ಪತ್ರೆ ಮುಂಭಾಗ ರಣರಂಗ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading