ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಯ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆಗಸ್ಟ್ 8 ರಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಅಕ್ರಮ ಪ್ರವೇಶ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಮತ್ತು ಸಮುದಾಯ ಹಕ್ಕುಗಳಿಗಾಗಿ ನಡೆಸಲಾಗಿದ್ದು, ಇದಕ್ಕೆ ಬೆಂಬಲ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು – ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆಯ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್ ಹಾಗೂ ಸರ್ತ ಜಾಲಿ.ವಿರುದ್ಧ ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.
ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಅವರು ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್ ಮತ್ತು ಸರ್ತ ಜಾಲಿ ವಿರುದ್ಧ ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅರಣ್ಯ ಇಲಾಖೆಯ ಅನುಮತಿಯಿಲ್ಲದೆ ಸಂರಕ್ಷಿತಾರಣ್ಯ ಪ್ರದೇಶದೊಳಗೆ ಪ್ರವೇಶಿಸುವುದು ಮತ್ತು ಚಟುವಟಿಕೆಗಳನ್ನು ನಡೆಸುವುದು ಅಪರಾಧವಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ಬೆಂಗಳೂರು–ಬೆಳಗಾವಿ: ನಿಲ್ದಾಣಗಳು, ಸಮಯ ಹಾಗೂ ದರಗಳ ಸಂಪೂರ್ಣ ಮಾಹಿತಿ
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


