Saturday, August 8, 2026
spot_img
More
    spot_img
    HomeTop StoryIPL 2025: ಡೆಲ್ಲಿಗೆ 75%, ಹೈದರಾಬಾದ್‌ಗೆ 4%; 25 ಪಂದ್ಯಗಳ ಬಳಿಕ ಪ್ಲೇಆಫ್ ಪ್ರವೇಶಿಸಲು ಯಾವ...

    IPL 2025: ಡೆಲ್ಲಿಗೆ 75%, ಹೈದರಾಬಾದ್‌ಗೆ 4%; 25 ಪಂದ್ಯಗಳ ಬಳಿಕ ಪ್ಲೇಆಫ್ ಪ್ರವೇಶಿಸಲು ಯಾವ ತಂಡಕ್ಕೆ ಎಷ್ಟಿದೆ ಅವಕಾಶ?

    ಮಾರ್ಚ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 25 ಪಂದ್ಯಗಳು ಮುಕ್ತಾಯವಾಗಿದೆ.

    Advertisement

    ನಿನ್ನೆ ( ಏಪ್ರಿಲ್ 11) ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 25ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಿಎಸ್‌ಕೆ ಕೆಕೆಆರ್ ವಿರುದ್ಧ ಹೀನಾಯ ಸೋಲನ್ನು ಕಂಡಿದೆ.

    ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲಲ್ಲಿ 9 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ 104 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ 10.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 107 ರನ್ ಕಲೆಹಾಕಿತು.

    ಈ ಸೋಲಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಸತತ ಐದು ಸೋಲುಗಳನ್ನು ಕಂಡು ಪ್ಲೇಆಫ್ ಪ್ರವೇಶಿಸಲು ಇರುವ ಅವಕಾಶವನ್ನು ಮತ್ತಷ್ಟು ಕಡಿಮೆ ಮಾಡಿಕೊಂಡಿದೆ. ಸದ್ಯ 25 ಪಂದ್ಯಗಳ ಮುಕ್ತಾಯದ ಬಳಿಕ ಯಾವ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಎಷ್ಟಿದೆ ಎಂಬ ಮಾಹಿತಿ ಕೆಳಕಂಡಂತಿದೆ..

    ಡೆಲ್ಲಿ ಕ್ಯಾಪಿಟಲ್ಸ್ – 75%

    ಗುಜರಾತ್ ಟೈಟನ್ಸ್ – 74%

    ಕೊಲ್ಕತ್ತಾ ನೈಟ್ ರೈಡರ್ಸ್ – 55%

    ಪಂಜಾಬ್ ಕಿಂಗ್ಸ್ – 52%

    ರಾಯಲ್ ಚಾಲೆಂಜರ್ಸ್ ಬೆಂಗಳೂರು – 50%

    ಲಕ್ನೋ ಸೂಪರ್ ಜೈಂಟ್ಸ್ – 47%

    ರಾಜಸ್ಥಾನ್ ರಾಯಲ್ಸ್ – 26%

    ಮುಂಬೈ ಇಂಡಿಯನ್ಸ್ – 11%

    ಚೆನ್ನೈ ಸೂಪರ್ ಕಿಂಗ್ಸ್ – 6%

    ಸನ್‌ರೈಸರ್ಸ್ ಹೈದರಾಬಾದ್ – 4%


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading