ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್ಲೈನ್ ಜೂಜು ಗೇಮ್ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ ಮಾದಕ ವಸ್ತುಗಳ ವ್ಯಸನಕ್ಕಿಂತ ಹೆಚ್ಚು ಹಾನಿಯನ್ನು ಆನ್ಲೈನ್ ಗೇಮ್ಗಳು ಮಾಡುತ್ತಿವೆ. ಇದರ ನಿಯಂತ್ರಣಕ್ಕಾಗಿ 2021ರಲ್ಲಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಕಾಯ್ದೆಯನ್ನು ಅಖಿಲ ಭಾರತ ಗೇಮಿಂಗ್ ಒಕ್ಕೂಟ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. 2022ರಲ್ಲಿ ಈ ತಿದ್ದುಪಡಿ ಕಾಯ್ದೆ ರದ್ದಾಗಿದೆ. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ ಎಂದರು.
ಕಂಪ್ಯೂಟರ್, ಮೊಬೈಲ್ ಆಪ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿ ಆನ್ಲೈನ್ ಗೇಮ್ ಆಡುವುದನ್ನು ಕಾಯ್ದೆ ವ್ಯಾಪ್ತಿಗೆ ತರಲಾಗಿದೆ. ಕಳೆದ ಏ.8ರಂದು ಆನ್ಲೈನ್ ಗೇಮ್ ನಡೆಸುವವರ ಸಭೆ ನಡೆಸಿ ನಿಯಂತ್ರಣ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಅವರು ಒಪ್ಪಿದ್ದಾರೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿ ಪ್ರಣಮ್ ಮೊಹಾಂತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸೆಪ್ಟೆಂಬರ್ನಲ್ಲಿ ಸಮಿತಿ ವರದಿ ಬರಲಿದೆ. ಆನ್ಲೈನ್ ಗೇಮ್ ನಿಯಂತ್ರಿಸಲು ಸಮಿತಿ ಮಾಡುವ ಶಿಫಾರಸ್ಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆನ್ಲೈನ್ ಗೇಮ್ ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳಲ್ಲಿ ಆನ್ಲೈನ್ ಆಟಗಳಿಗೆ ಸಂಬಂಧಿಸಿದಂತೆ 347 ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಜುಲೈ ಅಂತ್ಯಕ್ಕೆ 159 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.
ಮೆಟ್ರೊ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ!
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


