Wednesday, September 2, 2026
spot_img
More
    spot_img
    HomeStateDistrictಮಂಡ್ಯ: ಮೊಟ್ಟೆ ಕೊಟ್ಟಿದ್ದಕ್ಕೆ ಶಾಲೆ ತೊರೆದ 70 ಮಕ್ಕಳು

    ಮಂಡ್ಯ: ಮೊಟ್ಟೆ ಕೊಟ್ಟಿದ್ದಕ್ಕೆ ಶಾಲೆ ತೊರೆದ 70 ಮಕ್ಕಳು

    ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ.

    Advertisement

    ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಪೋಷಕರು ಖಡಕ್‌ ಆಗಿ ಹೇಳಿದ್ದರು.

    ಈ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆಯೇ ಮೊಟ್ಟೆ ವಿತರಣೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿದ್ದಾರೆ.

    ಘಟನೆಯ ಹಿನ್ನೆಲೆ: ಶಾಲೆ ಬಳಿ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಹಾರ, ಮೊಟ್ಟೆಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ನಿಯಮದಂತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮ ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading