ಉದಯಪುರ;ಉದಯಪುರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಉಂಟುಮಾಡಿದೆ. ಭಾನುವಾರ ಸಂಜೆ 7.30ರ ಸುಮಾರಿಗೆ, ಹೊಲದ ಬಳಿ ಒಬ್ಬಂಟಿಯಾಗಿದ್ದ ಬಾಲಕಿಯನ್ನು ಆರೋಪಿ ಬಲವಂತವಾಗಿ ಪೊದೆಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.ನೋವಿನಲ್ಲಿದ್ದ ಬಾಲಕಿ ಮನೆಗೆ ಬಂದು ಕುಟುಂಬಕ್ಕೆ ವಿಷಯ ತಿಳಿಸಿದ್ದಳು. ಕುಟುಂಬದವರು ತಕ್ಷಣವೇ ಆಕೆಯನ್ನು ಮಹಾರಾಣಾ ಭೂಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಪ್ರಕಾರ ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ.
ಸೋಮವಾರ ಬೆಳಗ್ಗೆ, ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ದಬೋಕ್ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ತ್ವರಿತ ಕ್ರಮಕ್ಕೆ ಆಗ್ರಹಿಸಿದರು. ಪ್ರತಿಭಟನಾಕಾರರು ಹೆದ್ದಾರಿಯ ಸರ್ವಿಸ್ ರಸ್ತೆಯನ್ನು ಬಂದ್ ಮಾಡುವ ಮೊದಲು ಕೆಲವು ಪೊಲೀಸ್ ಮತ್ತು ಖಾಸಗಿ ವಾಹನಗಳನ್ನು ಮತ್ತು ಬಸ್ಗಳನ್ನು ಧ್ವಂಸಗೊಳಿಸಿದರು. ಇದರಿಂದಾಗಿ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು.

ಪರಿಸ್ಥಿತಿಯನ್ನು ನಿಯಂತ್ರಿಸಲು ಮೂರು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಯಿತು. ಪೊಲೀಸರು ಗ್ರಾಮಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ಘಟನಾ ಸ್ಥಳದಿಂದ ವಿಧಿವಿಜ್ಞಾನ ಮತ್ತು ಶ್ವಾನ ದಳ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅಲ್ಲದೆ, ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ.13ರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


