ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್.ಸಿ.ಮಹದೇವಪ್ಪ, ಜಮೀರ್ ಆಹಮ್ಮದ್ ಖಾನ್, ಎನ್.ಎಸ್.ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಬರಬೇಕಿದೆ. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದ ಕಾರಣ ಹಲವಾರು ಗುತ್ತಿಗೆದಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಸಚಿವರ ಗಮನಕ್ಕೆ ತಂದರೆ ನಿರ್ಲಕ್ಷ್ಯ ಮಾಡುತ್ತಾರೆ ಎಂದು ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.
ಅಧಿಕಾರಿಗಳು ಹಾಗೂ ಸಚಿವರ ಈ ವರ್ತನೆಗೆ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಾಕಿ ಹಣ ಪಾವತಿ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


