Friday, August 7, 2026
spot_img
More
    spot_img
    HomeTop StoryIPL 2025: ಇಂದು ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್‌ಸಿಬಿ; ಗ್ರೀನ್ ಜೆರ್ಸಿ ತೊಟ್ಟಾಗ ಗೆಲುವಿಗಿಂತ ಸೋತಿದ್ದೇ...

    IPL 2025: ಇಂದು ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್‌ಸಿಬಿ; ಗ್ರೀನ್ ಜೆರ್ಸಿ ತೊಟ್ಟಾಗ ಗೆಲುವಿಗಿಂತ ಸೋತಿದ್ದೇ ಹೆಚ್ಚು!

    ಜೈಪುರ: ಇಂದು ( ಏಪ್ರಿಲ್ 13 ) ಜೈಪುರದಲ್ಲಿ ರಾಯಲ್ಸ್ ಮುಖಾಮುಖಿಯಾಗಲಿವೆ. ಮಧ್ಯಾಹ್ನ 3.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.

    Advertisement

    2009ರಿಂದ ಈ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮರಗಳನ್ನು ಬೆಳೆಸಬೇಕು ಎಂಬ ಸಂದೇಶವನ್ನು ಸಾರುತ್ತಿದೆ. ಇಂತಹ ಒಳ್ಳೆ ಉದ್ದೇಶದಿಂದ ಉಳಿದ ಯಾವ ತಂಡವೂ ಸಹ ಮಾಡದಿರುವ ಕೆಲಸವನ್ನು ಆರ್‌ಸಿಬಿ ಮಾಡುತ್ತಿದ್ದು ಇದಕ್ಕೆಂದು ವಿಶೇಷವಾದ ಗೌರವ ಸಂಪಾದಿಸಿದೆ.

    ಇನ್ನು ಈ ಗ್ರೀನ್ ಜೆರ್ಸಿ ತೊಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಣಕ್ಕಿಳಿದಾಗಲೆಲ್ಲ ಗೆಲುವಿಗಿಂತ ಸೋಲೇ ಹೆಚ್ಚು ಎಂಬುದನ್ನು ಹೇಳುತ್ತಿವೆ ಹಳೆಯ ಅಂಕಿಅಂಶಗಳು. ಹೌದು, ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳಲ್ಲಿ ಗ್ರೀನ್ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದು, ಈ ಪೈಕಿ ಕೇವಲ 4 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ ಹಾಗೂ 9 ಪಂದ್ಯಗಳಲ್ಲಿ ಸೋತಿದೆ, ಇನ್ನುಳಿದ ಒಂದು ಪಂದ್ಯ ಫಲಿತಾಶವಿಲ್ಲದೇ ಅಂತ್ಯಗೊಂಡಿದೆ.

    ಹೀಗೆ ಗ್ರೀನ್ ಜೆರ್ಸಿಯಲ್ಲಿ ಕೆಟ್ಟ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಆರ್‌ಸಿಬಿ ಈ ಬಾರಿ ಯಾವ ರೀತಿಯ ಫಲಿತಾಂಶ ಪಡೆದುಕೊಳ್ಳಲಿದೆ ನೋಡಬೇಕಿದೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಆರ್‌ಸಿಬಿ ಒಂದು ರನ್‌ನಿಂದ ಸೋತಿತ್ತು. 2023ರ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದ ಆರ್‌ಸಿಬಿ 7 ರನ್‌ಗಳ ಗೆಲುವು ಕಂಡಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading