ಹೊಸದಿಲ್ಲಿ: ತಮಿಳುನಾಡಿನ ಕರೂರು ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಕರೂರು ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಹೇಳಿದ ಸುಪ್ರೀಂಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ.
ಸೆಪ್ಟೆಂಬರ್.27ರಂದು ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಅವರ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ ಘಟನೆಯ ಬಗ್ಗೆ ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ.
ದುರಂತದ ಬಗ್ಗೆ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶರಾದ ಅಜಯ್ ರಸ್ತೋಗಿ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಎನ್.ವಿ.ಅಂಜಾರಿಯಾ ಅವರ ಪೀಠವು ಆದೇಶಿಸಿದೆ.
ಈ ಆದೇಶ ಹೊರಬೀಳುತ್ತಿದ್ದಂತೆ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹೊರಹಾಕುತ್ತಿದ್ದು, ಟಿವಿಕೆಗೆ ಬಿಜೆಪಿ ಬೆಂಬಲವಾಗಿ ನಿಂತಿದೆ ಎಂಬ ಟ್ವೀಟ್ಗಳು ಹರಿದಾಡುತ್ತಿವೆ. ಅಲ್ಲದೇ ವಿಜಯ್ ಬಟ್ಟೆಗೆ ಬಿಜೆಪಿ ಚಿಹ್ನೆ ಎಡಿಟ್ ಮಾಡಿ ವಿಜಯ್ ಟಿವಿಕೆಯಲ್ಲ, ಬಿಜೆಪಿ ಎಂದು ಕಾಲೆಳೆಯಲಾಗುತ್ತಿದೆ.
ಇನ್ನು ಬಿಜೆಪಿಯ ಉಮಾ ಆನಂದನ್ ಮತ್ತು ಮಣಿ ಜಿಎಸ್ ಕರೂರು ಕಾಲ್ತುಳಿತ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅರ್ಜಿ ಹಾಕಿದ್ದರು. ಇದೂ ಸಹ ಈ ರೀತಿಯ ಟ್ವೀಟ್ಗಳು ಹರಿದಾಡಲು ಕಾರಣವಾಗಿದ್ದು, ವಿಜಯ್ ಪರೋಕ್ಷವಾಗಿ ಬಿಜೆಪಿಗೆ ಬೆಂಬಲವಾಗಿದ್ದಾರೆ ಎಂದು ಟ್ರೋಲ್ಗಳು ವೈರಲ್ ಆಗುತ್ತಿವೆ.
ಈರುಳ್ಳಿಯೊಳಗಿನ ಕಪ್ಪು ಪದರ ಲಿವರ್ಗೆ ವಿಷ! ತಿನ್ನುವ ಮೊದಲು ಈ ಪ್ರಮುಖ ವಿಚಾರ ತಿಳಿದುಕೊಳ್ಳಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


