ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸಂಪುಟ ಸದಸ್ಯರಿಗಾಗಿ ಆಯೋಜಿಸಿರುವ ಭೋಜನಕೂಟದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ನಾವು ಆಗಾಗ್ಗೆ ಊಟಕ್ಕೆಂದು ಎಲ್ಲರೂ ಒಟ್ಟಿಗೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಪ್ರಶ್ನಿಸಿ ತೆರಳಿದರು.
ಇನ್ನು ಬಿಹಾರ ಚುನಾವಣೆ ಬಳಿಕ ಬದಲಾವಣೆ, ಸಂಪುಟ ಪುನಾರಚನೆಯ ಕೂಗು ಬಲವಾಗಿ ಕೇಳಿ ಬರುತ್ತಿದೆ. ಎರಡೂವರೆ ವರ್ಷ ಪೂರ್ಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಕೂಗು ಸದ್ದು ಮಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಹುದಿನಗಳ ಬಳಿಕ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಭೋಜನಕೂಟ ಆಯೋಜನೆ ಮಾಡಿದ್ದು, ಇದು ಹಲವು ವ್ಯಾಖ್ಯಾನಗಳನ್ನು ಹುಟ್ಟು ಹಾಕಿದೆ.
ಸಂಪುಟ ಪುನರ್ ರಚನೆ ಸಾಧ್ಯತೆ ಬಗ್ಗೆ ಕೆಲವು ಸಚಿವರು ಅಲ್ಲಗೆಳೆದಿದ್ದಾರೆ. ಆದರೆ, ನವೆಂಬರ್ ಕ್ರಾಂತಿ, ಬದಲಾವಣೆಯ ಮಧ್ಯೆ ಈ ಬೆಳವಣಿಗೆಗಳು ಸಾಕಷ್ಟು ಕುತೂಹಲ ಕೆರಳಿಸಿದೆ. ಹೈಕಮಾಂಡ್ ಜೊತೆಗಿನ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ನವೆಂಬರ್ನಲ್ಲಿ ಸಂಪುಟ ಪುನಾರಚನೆಯನ್ನು ಕೈಗೊಳ್ಳುವ ಯೋಜನೆಯನ್ನು ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಹಾಲಿ ಶೇ.50ರಷ್ಟು ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ. ನವೆಂಬರ್ನಲ್ಲಿ ಸುಮಾರು 15 ಹೊಸ ಸಚಿವರನ್ನು ಸೇರ್ಪಡೆಗೊಳಿಸುವುದರಿಂದ ಮುಖ್ಯಮಂತ್ರಿಯನ್ನು ತಕ್ಷಣವೇ ಬದಲಾಯಿಸಲು ಹೈಕಮಾಂಡ್ಗೆ ಕಷ್ಟವಾಗಬಹುದು. ಏಕೆಂದರೆ ಅಷ್ಟರಲ್ಲಿ ಹೊಸ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂದಿರುತ್ತದೆ. ಬಿಹಾರ ಚುನಾವಣೆಯ ನಂತರದ ಸಂಪುಟ ಪುನರ್ ರಚನೆ ಕಾರ್ಯತಂತ್ರ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಬಹುದು ಎಂದು ಪಕ್ಷದೊಳಗಿನವರು ಹೇಳುತ್ತಾರೆ.
ಬೆಂಗಳೂರು: ಹೆಂಡತಿ, ಮಗು ಮುಂದೆಯೇ ಹಾಲಿನ ಅಂಗಡಿ ಮಾಲೀಕನಿಗೆ ಮನಬಂದಂತೆ ಥಳಿಸಿದ ಬಿಹಾರಿ ರೌಡಿ; ವಿಡಿಯೊ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


