Friday, August 7, 2026
spot_img
More
    spot_img
    HomeLatest newsಮಗಳ ಮೇಲೆ ಕಣ್ಣು ಹಾಕಿದ ತಂದೆಯನ್ನು ಕೊಲೆಗೈದ ಇಬ್ಬರು ಪತ್ನಿಯರು

    ಮಗಳ ಮೇಲೆ ಕಣ್ಣು ಹಾಕಿದ ತಂದೆಯನ್ನು ಕೊಲೆಗೈದ ಇಬ್ಬರು ಪತ್ನಿಯರು

    ಸೂರ್ಯ ಪೇಟೆ (ತೆಲಂಗಾಣ): ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಆತನ ಇಬ್ಬರು ಪತ್ನಿಯರೇ ಸೇರಿ ಕೊಲೆಗೈದ ಘಟನೆ ತೆಲಂಗಾಣದಲ್ಲಿ ಸೂರ್ಯಪೇಟೆಯಲ್ಲಿ ನಡೆದಿದೆ.

    Advertisement

    ಸೂರ್ಯಪೇಟೆ ಜಿಲ್ಲೆಯ ಚಿವ್ವೆನ್ಲಾ ತಾಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 43 ವರ್ಷದ ವೃತ್ತಿಯಲ್ಲಿ ಚಾಲಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗುವಿನ ಮೋಹದಲ್ಲಿ ತನ್ನ ಪತ್ನಿಯ ತಂಗಿಯನ್ನೂ ಮದುವೆಯಾಗಿದ್ದಾನೆ. ಆಕೆಗೆ ಗಂಡು ಮಗು ಜನಿಸಿದ್ದು, ಎಲ್ಲರೂ ಒಂದೇ ಕುಟುಂಬದಲ್ಲಿ ಒಟ್ಟಿಗೆ ನೆಲೆಸಿದ್ದರು.

    ಕೆಲವು ತಿಂಗಳ ಹಿಂದೆ ತನ್ನ ಮೊದಲ ಪತ್ನಿಯ ಕಿರಿ ಮಗಳು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಹಿರಿ ಮಗಳು ಹೈದರಾಬಾದ್‌ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ. ಕಿರಿ ಮಗಳ ಸಾವಿನ ನಂತರ ಆರೋಪಿ ಮದ್ಯದ ಚಟಕ್ಕೆ ದಾಸನಾಗಿದ್ದ. ಅಂದಿನಿಂದ ಆತನ ನಡವಳಿಕೆ ಬದಲಾಗುತ್ತಾ ಸಾಗಿದೆ. ಇಬ್ಬರು ಪತ್ನಿಯರಿಗೆ ಮಾನಸಿಕ, ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದ. ಇದರಿಂದ ಪತ್ನಿಯರು ಸಾಕಷ್ಟು ಮನನೊಂದಿದ್ದರು. ಹಿರಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ. ದಿನ ಕಳೆದಂತೆ ಆಕೆಗೆ ಲೈಂಗಿಕ ಕಿರುಕುಳ ನೀಡಲೂ ಶುರು ಮಾಡಿದ್ದಾನೆ.

    ಹೈದರಾಬಾದ್‌ನಲ್ಲಿ ನೆಲೆಸಿದ್ದ ಮಗಳು ಸಂಕ್ರಾಂತಿ ಹಬ್ಬಕ್ಕೆ ಸಿಕ್ಕ ರಜೆಗಾಗಿ ಊರಿಗೆ ಬಂದಿದ್ದಳು. ಹೀಗೆ ಬಂದ ಮಗಳೊಂದಿಗೆ ತಂದೆ ಅನುಚಿತವಾಗಿ ವರ್ತಿಸಲು ಶುರು ಮಾಡಿದ್ದಾನೆ. ಇದು ತಪ್ಪು, ನಿಮ್ಮ ನಡವಳಿಕೆ ಬದಲಾಯಿಸಿಕೊಳ್ಳಿ ಎಂದು ಪತ್ನಿಯರು ಅಂಗಲಾಚಿ ಬೇಡಿಕೊಂಡರೂ ಆರೋಪಿ ನಿರ್ಲಕ್ಷಿಸಿದ್ದಾನೆ. ಇದರಿಂದ ಬೇಸರಗೊಂಡು ಒಂದು ದಿನ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚಿಸಿದ್ದರು.

    ಆದರೆ ಅದೇ ರಾತ್ರಿ ಪತಿ ತನ್ನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದ್ದ. ಇದರಿಂದ ಕೋಪಗೊಂಡ ಇಬ್ಬರು ಪತ್ನಿಯರು ಪತಿಯ ಮರ್ಮಾಂಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಪೊಲೀಸರು ಘಟನೆ ಸ್ಥಳಕ್ಕೆ ದೌಡಾಯಿಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡಿದ್ದಾರೆ. ಮೃತನ ಸಹೋದರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ವಿ. ಮಹೇಶ್ ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading