Saturday, August 8, 2026
spot_img
More
    spot_img
    HomeStateಈ ಬಾರಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಲಿಲ್ಲ ಸೂರ್ಯರಶ್ಮಿ; ಕಾದಿದೆಯಾ ಅಪಾಯ? ಏನಂದ್ರು ಅರ್ಚಕರು?

    ಈ ಬಾರಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಲಿಲ್ಲ ಸೂರ್ಯರಶ್ಮಿ; ಕಾದಿದೆಯಾ ಅಪಾಯ? ಏನಂದ್ರು ಅರ್ಚಕರು?

    ಬೆಂಗಳೂರು: ಗವಿಪುರದ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದ ಮಕರ ಸಂಕ್ರಮಣದಂದು ಸೂರ್ಯರಶ್ಮಿ ಗವಿಗಂಗಾಧರೇಶ್ವರ ಮೂರ್ತಿಯ ಮೇಲೆ ಬೀಳುತ್ತಿತ್ತು. ಆದರೆ ಈ ಬಾರಿ ಮೋಡ ಕವಿದ ವಾತಾವರಣವಿದ್ದರಿಂದ ಸೂರ್ಯರಶ್ಮಿ ಬೀಳಲಿಲ್ಲ.

    Advertisement

    ಇನ್ನು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯವ ಈ ಚಮತ್ಕಾರವನ್ನು ಕಣ್ತುಂಬಿಕೊಳ್ಳಲು ಅಪಾರವಾದ ಭಕ್ತ ಸಮೂಹ ನೆರೆದಿತ್ತು. ನೇರ ದರ್ಶನದ ಅವಕಾಶ ಎಲ್ಲರಿಗೂ ಸಿಗದ ಕಾರಣ ಎಲ್‌ಇಡಿ ಸ್ಕ್ರೀನಿಂಗ್‌ ಅನ್ನೂ ಸಹ ಆಯೋಜಿಸಲಾಗಿತ್ತು. ಆದರೆ ಸೂರ್ಯರಶ್ಮಿ ಬೀಳದೆ ಇರುವುದು ಎಲ್ಲರಲ್ಲೂ ನಿರಾಸೆ ಉಂಟುಮಾಡಿದೆ. ದೇವಾಲಯದ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಈ ರೀತಿಯಾಗಿದ್ದು, ಇದು ಅಪಾಯದ ಮುನ್ಸೂಚನೆಯ ಎಂಬ ಪ್ರಶ್ನೆ ಭಕ್ತರಲ್ಲಿ ಮೂಡಿದೆ.

    ಇನ್ನು ಕೊವಿಡ್‌ ಆಗಮಿಸಿದ ವರ್ಷದಲ್ಲಿ ಸೂರ್ಯನ ಕಿರಣಗಳು ಗವಿಗಂಗಾಧರೇಶ್ವರನನ್ನು ಸ್ಪಲ್ಪ ಹೊತ್ತು ಮಾತ್ರ ಸ್ಪರ್ಶಿಸಿತ್ತು. ಆ ಸಂದರ್ಭದಲ್ಲಿ ಅರ್ಚಕರು ಈ ಬಾರಿ ಸಾವು ನೋವು ಆಗಲಿದೆ ಎಂದಿದ್ದರು. ಅದರಂತೆ ಕೊವಿಡ್‌ನಿಂದ ಅಪಾರ ಸಾವುಂಟಾಯಿತು. ಹೀಗಾಗಿ ಭಕ್ತರಲ್ಲಿ ಆತಂಕ ಉಂಟಾಗಿದೆ.

    ಹೀಗಿರುವಾಗ ಈ ಕುರಿತು ದೇವಾಲಯದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್‌ ಪ್ರತಿಕ್ರಿಯಿಸಿದ್ದು “ಸಂಜೆ 5:20 ರಿಂದ 5:23ರ ಸುಮಾರಿಗೆ ದೇಗುಲ ಬಲಭಾಗದ ಕಮಾನಿನಿಂದ ಕಿಟಕಿಯ ಮೂಲಕ ಪ್ರವೇಶಿಸಬೇಕಿದ್ದ ಸೂರ್ಯ ರಶ್ಮಿ ಮೋಡ ಕವಿದಿದ್ದರಿಂದ ಗೋಚರವಾಗಿಲ್ಲ. ಇದರಿಂದ ಕಾತರದಿಂದ ಕಾಯುತ್ತಿದ್ದ ಭಕ್ತರಿಗೆ ನಿರಾಸೆಯುಂಟಾಗಿದೆ. ಶಿವಲಿಂಗಕ್ಕೆ ಸೂರ್ಯನ ಪೂಜೆ ನಡೆದಿದೆ. ಈಶ್ವರನ ಅನುಗ್ರಹ ನಾಳೆಯಿಂದ ಎಲ್ಲರಿಗೂ ಸಿಗುತ್ತದೆ. ಸೂರ್ಯರಶ್ಮಿಯು ಖಂಡಿತವಾಗಿಯೂ ಶಿವಲಿಂಗವನ್ನ ಸ್ಪರ್ಶಿಸಿದೆ. ಆದರೆ, ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿಯ ಸ್ಪರ್ಶವಾಗಿದೆ ಎಂದು ತಿಳಿದಿಲ್ಲ. ಪ್ರಸಕ್ತ ವರ್ಷದಲ್ಲಿ ಯಾವುದೇ ಕೆಡುಕುಗಳು ಉಂಟಾಗುವುದಿಲ್ಲ” ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading