Friday, August 7, 2026
spot_img
More
    spot_img
    HomeTop Storyಸಂವಿಧಾನ ಶಿಲ್ಪಿ ಅಂಬೇಡ್ಕರ್ ಜನ್ಮದಿನ; ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

    ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜನ್ಮದಿನ; ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    Advertisement

    ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

    ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

    ಇತ್ತೀಚೆಗೆ ಕೆಲವರು ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading