ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ ನಿಧನರಾಗಿದ್ದಾರೆ. ನಟಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹಿರಿಯ ನಟಿ ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಹಲವು ಚಿತ್ರಗಳಲ್ಲಿ ನಟಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಹ ಟ್ವೀಟ್ ಮಾಡಿದ್ದು, ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗಲ್ಲ ಎಂದು ಕಿಡಿಕಾರಿದ ಸಿದ್ದರಾಮಯ್ಯ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


