Thursday, September 3, 2026
spot_img
More
    spot_img
    HomeInternationalಕೇರಳದಲ್ಲಿ ಶಂಕಿತ ನಿಫಾ ವೈರಸ್‌ನಿಂದ ಮತ್ತೊಬ್ಬರು ಸಾವು; ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

    ಕೇರಳದಲ್ಲಿ ಶಂಕಿತ ನಿಫಾ ವೈರಸ್‌ನಿಂದ ಮತ್ತೊಬ್ಬರು ಸಾವು; ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

    ಪಾಲಕ್ಕಾಡ್:‌ ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾನೆ.

    Advertisement

    ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್‌ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

    ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾಗೆ ಧನಾತ್ಮಕ ಪರೀಕ್ಷೆ ವರದಿ ಬಂದಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ದೃಢಪಡಿಸಿದ್ದಾರೆ.

    ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಿಂದ ಅಂತಿಮ ದೃಢೀಕರಣಕ್ಕಾಗಿ ಕಾಯಲಾಗುತ್ತಿದ್ದು, ಶಂಕಿತ ನಿಫಾ ವೈರಸ್‌ನಿಂದ ಮೃತಪಟ್ಟ ಮೊದಲನೆಯವರು ಮಲಪ್ಪುರಂ ಮೂಲದವರಾಗಿದ್ದಾರೆ.

    ಹೊಸ ಶಂಕಿತ ಪ್ರಕರಣಕ್ಕೆ ಪ್ರತಿಕ್ರಿಯೆಯಾಗಿ ಕೇರಳ ಸರ್ಕಾರವು ಸಂಪರ್ಕ ಪತ್ತೆಹಚ್ಚುವಿಕೆ ಮತ್ತು ಕ್ಷೇತ್ರ ಕಣ್ಗಾವಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ.

    ಮೃತರೊಂದಿಗೆ ಸಂಪರ್ಕಕ್ಕೆ ಬಂದ 46 ವ್ಯಕ್ತಿಗಳ ಪಟ್ಟಿಯನ್ನ ಸಿದ್ಧಪಡಿಸಲಾಗಿದ್ದು, ರೋಗಿಯ ಚಲನವಲನಗಳನ್ನು ಪತ್ತೆಹಚ್ಚಲು ಸಿಸಿ ಟಿವಿ ದೃಶ್ಯಾವಳಿ ಹಾಗೂ ಮೊಬೈಲ್‌ ಟವರ್‌ ಡೇಟಾವನ್ನು ಬಳಸಲಾಗಿದೆ.

    ಪಾಲಕ್ಕಾಡ್‌, ಮಲಪ್ಪುರಂ, ಕೋಝಿಕ್ಕೋಡ್‌, ಕಣ್ಣೂರು, ವಯನಾಡು ಮತ್ತು ತ್ರಿಶೂರ್‌ ಜಿಲ್ಲೆಗಳಾದ್ಯಂತ ಆಸ್ಪತ್ರೆಗಳನ್ನು ನಿಫಾ ಸೋಂಕಿತರ ಚಿಕಿತ್ಸೆಗೆ ಸಜ್ಜುಗೊಳಿಸಲಾಗಿದೆ.

    ನಿಫಾ ವೈರಸ್‌ ಸೋಂಕನ್ನು ಹೋಲುವ ಅಧಿಕ ಜ್ವರ ಅಥವಾ ಎನ್ಸೆಫಾಲಿಟಿಸ್‌ನಂತಹ ಲಕ್ಷಣಗಳನ್ನು ಪ್ರದರ್ಶಿಸುವ ರೋಗಿಗಳನ್ನು ತಕ್ಷಣ ವರದಿ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

    ನಿಮ್ಮ ಹೃದಯದ ಕಾಳಜಿಗೆ ನೀವು ತೋರಿಸಬೇಕಾದ ಕಾಳಜಿಯೇ ಜೀವನಶೈಲಿ ಬದಲಾವಣೆ

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading