Monday, August 31, 2026
spot_img
More
    spot_img
    HomeStateDistrictಮೈಸೂರು ನಗರ ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ; 63 ಲಕ್ಷ ಮೌಲ್ಯದ ಕಳವು ಸ್ವತ್ತು ವಶ

    ಮೈಸೂರು ನಗರ ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ; 63 ಲಕ್ಷ ಮೌಲ್ಯದ ಕಳವು ಸ್ವತ್ತು ವಶ

    ಮೈಸೂರು: ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್‌ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

    Advertisement

    ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, ಒಟ್ಟು 42 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ 63 ಲಕ್ಷ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 19 ಆರೋಪಿಗಳನ್ನು ಬಂಧಿಸಲಾಗಿದೆ.

    ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು 63 ಲಕ್ಷ ಮೌಲ್ಯದ ಸ್ವತ್ತುಗಳಲ್ಲಿ 659 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 27 ದ್ವಿಚಕ್ರ ವಾಹನಗಳು, 1 ಕಾರು, 2,57,000 ನಗದು, ಮತ್ತು 1 ಲ್ಯಾಪ್‌ ಟಾಪ್‌ ಸೇರಿವೆ ಎಂದು ಮಾಹಿತಿ ನೀಡಿದರು.

    8 ಸರಗಳ್ಳತನ ಪ್ರಕರಣಗಳು, 2 ಮನೆಗಳ್ಳತನ ಪ್ರಕರಣಗಳು, 1 ಮನೆ ಕೆಲಸದವರಿಂದ ಕಳ್ಳತನ ಪ್ರಕರಣ, 28 ವಾಹನ ಕಳ್ಳತನ ಪ್ರಕರಣಗಳು, 3 ಸಾಮಾನ್ಯ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.

    ಇನ್ನು ಪೊಲೀಸರು ಮಾದಕ ವಸ್ತುಗಳ ವಿರುದ್ಧವೂ ಕಾರ್ಯಾಚರಣೆ ನಡೆಸಿದ್ದು, 11 ಎನ್‌ಡಿಪಿಎಸ್‌ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ 65 ಕೆಜಿ 800 ಗ್ರಾಂ ಗಾಂಜಾ ಹಾಗೂ 23 ಗ್ರಾಂ ಎಂಡಿಎಂಎ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಕಾಬೂಲ್ ಕಡ್ಲೆಯಿಂದ ತಯಾರಿಸಿ ಟೇಸ್ಟಿ ಮತ್ತು ಹೆಲ್ದಿ ಚೋಲೆ ಚಾಟ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading