ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಮಿಂಚಿನ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆಪಾರ ಪ್ರಮಾಣದ ನಗದು, ಆಸ್ತೀ, ಒಡವೆ, ಚರ- ಸ್ಥಿರ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೂ ಸಹ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಜಿ. ಮಂಜುನಾಥ್ ಹಾಗೂ ಬಿಎಂಆರ್ಸಿಎಲ್ನ ಭೂಸ್ವಾಧೀನ ಅಧಿಕಾರಿ ಎನ್.ಕೆ.ಗಂಗಾಮಾರೀಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಗ್ ಶಾಕ್ ನೀಡಿದ್ದಾರೆ.
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ: ಸಿದ್ದರಾಮಯ್ಯ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


