Tuesday, September 1, 2026
spot_img
More
    spot_img
    HomeTop StoryJob Alert: ಚಾಮರಾಜನಗರದಲ್ಲಿವೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು

    Job Alert: ಚಾಮರಾಜನಗರದಲ್ಲಿವೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು

    ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Advertisement

    ಅರ್ಜಿಗಳನ್ನು  ಇಲಾಖಾ ವೆಬ್ ಸೈಟ್  https://karnemakaone.kar.nic.in/abcd/‌ ನಲ್ಲಿ ಫೆಬ್ರವರಿ 7 ರೊಳಗೆ ಸಲ್ಲಿಸಬೇಕು.  ಆನ್‌ಲೈನ್ ಮೂಲಕವೇ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಇತರೇ ಯಾವುದೇ ಮೂಲದಿಂದ ಸಲ್ಲಿಸಲು ಅವಕಾಶವಿರುವುದಿಲ್ಲ.

    ಒಬ್ಬರೇ ಅಭ್ಯರ್ಥಿ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಲ್ಲಿ, ಪ್ರತ್ಯೇಕವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ. ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ  ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

    ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮಪಂಚಾಯಿತಿಯ ಕುಂಟಗುಡಿ ಅಂಗನವಾಡಿ ಕೇಂದ್ರ (ಪರಿಶಿಷ್ಟ ಪಂಗಡ), ದೇಮಹಳ್ಳಿ ಗ್ರಾಮಪಂಚಾಯಿತಿಯ ಹೆಬ್ಬಹಳ್ಳಿ ಅಂಗನವಾಡಿ ಕೇಂದ್ರ (ಇತರೆ), ನವಿಲೂರು ಗ್ರಾಮಪಂಚಾಯಿತಿಯ ಬಿ.ಎಂ.ಕೆ ಹುಂಡಿ ಅಂಗನವಾಡಿ ಕೇಂದ್ರ (ಇತರೆ), ಕೆಂಪನಪುರ ಗ್ರಾಮಪಂಚಾಯಿತಿಯ ಕೆಂಪನಪುರ ಕೇಂದ್ರ-೪ನೇ ಅಂಗನವಾಡಿ ಕೇಂದ್ರ (ಪರಿಶಿಷ್ಟ ಜಾತಿ), ಇರಸವಾಡಿ ಗ್ರಾಮಪಂಚಾಯಿತಿಯ ಕಳ್ಳಿಪುರ ಅಂಗನವಾಡಿ ಕೇಂದ್ರ (ಇತರೆ), ಭೋಗಾಪುರ ಗ್ರಾಮಪಂಚಾಯಿತಿಯ ಕಸ್ತೂರು ಅಂಗನವಾಡಿ ಕೇಂದ್ರ (ಇತರೆ), ಕಾಗಲವಾಡಿ ಗ್ರಾಮ ಪಂಚಾಯಿತಿಯ ಕಾಗಲವಾಡಿಮೋಳೆ-೧ನೇ ಅಂಗನವಾಡಿ ಕೇಂದ್ರ (ಇತರೆ), ಆಲೂರು ಗ್ರಾಮಪಂಚಾಯಿತಿಯ ಬಸಪನಪಾಳ್ಯ -೨ನೇ ಅಂಗನವಾಡಿ ಕೇಂದ್ರ (ಪರಿಶಿಷ್ಟ ಜಾತಿ), ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

    ಮಾದಪುರ ಗ್ರಾಮಪಂಚಾಯಿತಿಯ ಕಾಡಹಳ್ಳಿ-೨ನೇ ಅಂಗನವಾಡಿ ಕೇಂದ್ರ (ಪರಿಶಿಷ್ಟ ಜಾತಿ), ಇರಸವಾಡಿ ಗ್ರಾಮಪಂಚಾಯಿತಿಯ ಸುತ್ತೂರು ೩ನೇ ಅಂಗನವಾಡಿ ಕೇಂದ್ರ (ಪರಿಶಿಷ್ಟ ಜಾತಿ), ಗಂಗವಾಡಿ-೧ನೇ ಅಂಗನವಾಡಿ ಕೇಂದ್ರ (ಪರಿಶಿಷ್ಟ ಜಾತಿ), ಜ್ಯೋತಿಗೌಡನಪುರ ಗ್ರಾಮಪಂಚಾಯಿತಿಯ ನಲ್ಲೂರು ೧ನೇ ಅಂಗನವಾಡಿ ಕೇಂದ್ರ (ಪರಿಶಿಷ್ಟ ಜಾತಿ), ಕುರುಬರಹುಂಡಿ (ಇತರೆ), ದೇಮಳ್ಳಿ ಗ್ರಾಮಪಂಚಾಯಿತಿಯ ಮೂಡಲ ಅಗ್ರಹಾರ ೨ನೇ ಅಂಗನವಾಡಿ ಕೇಂದ್ರ (ಇತರೆ ೩ನೆ ಬಾರಿ), ಹೊಂಗನೂರು ಗ್ರಾಮಪಂಚಾಯಿತಿಯ ಹೊಂಗನೂರು ೭ನೇ ಅಂಗನವಾಡಿ ಕೇಂದ್ರ (ಇತರೆ), ಕೆಂಪನಪುರ ಗ್ರಾಮ ಪಂಚಾಯಿತಿಯ ಚುಂಗಡಿಪುರ ಅಂಗನವಾಡಿ ಕೇಂದ್ರ (ಇತರೆ), ಮಸಣಾಪುರ ಗ್ರಾಮಪಂಚಾಯಿತಿಯ ಚಾಟೀಪುರ ೩ನೇ ಅಂಗನವಾಡಿ ಕೇಂದ್ರ (ಇತರೆ), ನಾಗವಳ್ಳಿ ಗ್ರಾಮಪಂಚಾಯಿತಿಯ ಪುಟ್ಟನಪುರ ಅಂಗನವಾಡಿ ಕೇಂದ್ರ (ಇತರೆ), ನವಿಲೂರು ಗ್ರಾಮಪಂಚಾಯಿತಿಯ ಬಿಎಂಕೆ ಹುಂಡಿ ಅಂಗನವಾಡಿ ಕೇಂದ್ರ (ಇತರೆ), ಗಣಿಗನೂರು ೧ನೇ ಅಂಗನವಾಡಿ ಕೇಂದ್ರ (ಇತರೆ), ಬಾಗಳಿ ಗ್ರಾಮಪಂಚಾಯಿತಿಯ ಬಾಗಳಿ-೪ ಅಂಗನವಾಡಿ ಕೇಂದ್ರ (ಇತರೆ), ಬದನಗುಪ್ಪೆ ಗ್ರಾಮಪಂಚಾಯಿತಿಯ ಬದನಗುಪ್ಪೆ-೨ನೇ ಅಂಗನವಾಡಿ ಕೇಂದ್ರ (ಇತರೆ), ಮಂಗಲ ಗ್ರಾಮಪಂಚಾಯಿತಿಯ ಹುಲ್ಲೇಪುರ ಅಂಗನವಾಡಿ ಕೇಂದ್ರ (ಇತರೆ), ಹೆಗ್ಗೋಠಾರ ಗ್ರಾಮಪಂಚಾಯಿತಿಯ ಪಣ್ಯದಹುಂಡಿ ಅಂಗನವಾಡಿ ಕೇಂದ್ರ (ಇತರೆ), ನವಿಲೂರು ಗ್ರಾಮಪಂಚಾಯಿತಿಯ ಸೊತ್ತನಹುಂಡಿ ಅಂಗನವಾಡಿ ಕೇಂದ್ರ (ಇತರೆ), ಭೋಗಾಪುರ ಗ್ರಾಮಪಂಚಾಯಿತಿಯ ಕೆ.ಮೂಕಹಳ್ಳಿ ಅಂಗನವಾಡಿ ಕೇಂದ್ರ (ಇತರೆ), ಆಲೂರು ಗ್ರಾಮಪಂಚಾಯಿತಿಯ ಲಿಂಗರಾಜಪುರ ಅಂಗನವಾಡಿ ಕೇಂದ್ರ (ಇತರೆ) ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

    ೧೯ ರಿಂದ ೩೫ ವಯೋಮಿತಿಯೊಳಗಿನ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.  ಆಯ್ಕೆ ಪ್ರಕ್ರಿಯೆಯಲ್ಲಿ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಂತೇಮರಹಳ್ಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading