Friday, August 7, 2026
spot_img
More
    spot_img
    HomeTop Storyಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನಿಗೆ 3 ಹಸು ಕೊಡಿಸಿದ ಜಮೀರ್‌ ಅಹಮ್ಮದ್‌

    ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನಿಗೆ 3 ಹಸು ಕೊಡಿಸಿದ ಜಮೀರ್‌ ಅಹಮ್ಮದ್‌

    ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕನಿಗೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಮೂರು ಹಸುಗಳನ್ನು ನೀಡಿದ್ದಾರೆ.

    Advertisement

    ಬೆಂಗಳೂರಿನ ವಿನಾಯಕನಗರದಲ್ಲಿ ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

    ಘಟನೆ ನಡೆಯುತ್ತಿದ್ದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಹಸುವಿನ ಮಾಲೀಕ ಕರ್ಣ ಮನೆಗೆ ಭೇಟಿ ನೀಡಿ ಸಮಾಧಾನ ಮಾಡಿದ್ದಲ್ಲದೇ ಮೂರು ಹಸುಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು.

    ಈ ಹಿನ್ನೆಲೆಯಲ್ಲಿಂದು ಅವರ ಮನೆಗೆ ಭೇಟಿ ನೀಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ಕರ್ಣ ಅವರ ತಾಯಿ ಸವರಿ ಅಮ್ಮಳ್‌, ಸಹೋದರಿ ಅಮುದಾ ಅವರಿಗೆ ಮೂರು ಲಕ್ಷ ರೂ ವೆಚ್ಚದಲ್ಲಿ ಹಸುಗಳನ್ನು ಖರೀದಿಸಿ ನೀಡಿದ್ದಾರೆ.

    ಈ ವೇಳೆ ಮಾತನಾಡಿದ ಹಸುವಿನ ಮಾಲೀಕ ಕರ್ಣ ಅವರ ಸಹೋದರಿ ಅಮುದಾ ಅವರು, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆಯ ಮನಸ್ಸಿನಿಂದ ಹಸುಗಳನ್ನು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರು ಜೊತೆ ಇದ್ದೇವೆ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading