ಹೈದರಾಬಾದ್: ಇಬ್ಬರು ಸಹೋದರಿಯರು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದಮರಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಮೃತಪಟ್ಟವವರನ್ನು ತನುಶ್ರೀ, ಅಭಿನೇತ್ರಿ ಎಂದು ಗುರುತಿಸಲಾಗಿದೆ. ಪೋಷಕರು ಸಂಬಂಧಿಕರೊಬ್ಬರ ವಿವಾಹದ ಬಗ್ಗೆ ಚರ್ಚಿಸಲು ಮಕ್ಕಳನ್ನು ಕರೆದುಕೊಂಡು ಅಜ್ಜಿಯ ಮನೆಗೆ ಹೋಗಿದ್ದರು.
ಚರ್ಚೆ ನಡೆಯುತ್ತಿರುವಾಗ ತನುಶ್ರೀ ಮತ್ತು ಅಭಿನೇತ್ರಿ ಹೊರಗೆ ಹೋಗಿ, ಕಾರಿನ ಬಾಗಿಲು ತೆರೆದು, ವಾಹನದೊಳಗೆ ಯಾರಿಗೂ ತಿಳಿಯದಂತೆ ಕುಳಿತಿದ್ದರು.ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಾರಿನಲ್ಲೇ ಇದ್ದರು, ಉಸಿರುಗಟ್ಟುವಿಕೆಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಪೋಷಕರು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಯಾಗಿದೆ, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


