ಬೆಂಗಳೂರು ದಕ್ಷಿಣ: ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಬಿರುದನ್ನು ಪಡೆದಿರುವ ಬಿ. ಸರೋಜಾದೇವಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ನಿನ್ನೆ ( ಜುಲೈ 14 ) ಬೆಂಗಳೂರಿನ ಮಲ್ಲೇಶ್ವರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದ ಸರೋಜಾದೇವಿ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನೆರವೇರಿತು.
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿ ಸರೋಜಾದೇವಿ ಅವರು ಎಲ್ಲ ಭಾಷೆಯಲ್ಲಿಯೂ ಅಪಾರ ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ನಟಿ. ಇಂದು ಎಲ್ಲ ಭಾಷೆಯವರೂ ಅವರಿಗೆ ನಮನ ಸಲ್ಲಿಸುತ್ತಿದ್ದಾರೆ. ಅಂತಹ ಕಲಾವಿದೆ ನಮ್ಮ ಜಿಲ್ಲೆಯವರೆಂಬುದು ಹೆಮ್ಮೆಯ ವಿಚಾರ ಎಂದರು.
ಅಲ್ಲದೇ ಸರೋಜಾದೇವಿ ಅವರ ಒಡನಾಟ 82ರಿಂದ ಇದ್ದು ತಾನು ಮೊದಲ ಬಾರಿಗೆ ಮಂತ್ರಿಯಾದಾಗಿನಿಂದಲೂ ಪರಿಚಯ ಎಂದರು. ಆರಂಭದ ದಿನಗಳಲ್ಲಿ ಸಿಕ್ಕಾಗಲೆಲ್ಲ ʼಏಯ್.. ನೀನು ಫಿಲ್ಮ್ನಲ್ಲಿ ಹೀರೊ ಆಗಬಹುದು ಕಣೋʼ ಎಂದು ಕಾಮೆಂಟ್ ಮಾಡುತ್ತಿದ್ದರು ಎಂದು ಡಿಕೆ ಶಿವಕುಮಾರ್ ಹಳೆಯ ಘಟನೆಗಳನ್ನು ಮೆಲುಕು ಹಾಕಿದರು.
ಅತಿ ಚಿಕ್ಕ ವಯಸ್ಸಿನಲ್ಲಿಯೇ ಭಾರತ ಸರ್ಕಾರದ ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ಪಡೆದುಕೊಂಡು ಕೀರ್ತಿಯನ್ನು ತಂದಿದ್ದಾರೆ ಎಂದು ಹೊಗಳಿದರು.
ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಶರಣ ಪ್ರಕಾಶ್ ಪಟೇಲ್
ಎಐ ಕೃಷಿ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


