Saturday, May 9, 2026
spot_img
More
    spot_img
    HomeLatest newsಪಹಲ್ಗಾಮ್‌ ಉಗ್ರರ ದಾಳಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗುಪ್ತಚರ ಸಂಸ್ಥೆ

    ಪಹಲ್ಗಾಮ್‌ ಉಗ್ರರ ದಾಳಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗುಪ್ತಚರ ಸಂಸ್ಥೆ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‍ನಾಗ್‍ನಲ್ಲಿರುವ ಪಹಲ್ಗಾಮ್‍ನಲ್ಲಿ ನಡೆದ ಉಗ್ರ ದಾಳಿಯು 26/11 ಮುಂಬೈ ದಾಳಿಯಂತೆಯೇ ಎಲ್‍ಇಟಿ-ಐಎಸ್‍ಐ ಜಂಟಿ ಯೋಜನೆಯಾಗಿತ್ತು ಎನ್ನುವ ಮಾಹಿತಿ ಇದೀಗ ಬಹಿರಂಗಗೊಂಡಿದೆ.

    ಪಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಯು 26 ಅಮಾಯಕರನ್ನು ಬಲಿ ಪಡೆದಿತ್ತು. ಈ ದಾಳಿಯ ಹಿಂದೆ ಐಎಸ್‍ಐ ಹಾಗೂ ಲಷ್ಕರ್-ಎ-ತೊಯ್ಬಾದ ಬೆಂಬಲವಿದ್ದು, ಪಾಕಿಸ್ತಾನದ ರಾಜಕೀಯ ಮತ್ತು ಮಿಲಿಟರಿ ಅಧಿಕಾರಿಗಳ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ ಎನ್ನವು ಮಾಹಿತಿಯೂ ಸಿಕ್ಕಿದೆ.

    ಬೈಸರನ್ ಹುಲ್ಲುಗಾವಲುಗಳಲ್ಲಿ ಜನರನ್ನು ಅವರ ಧರ್ಮವನ್ನು ಕೇಳಿದ ಬಳಿಕ ಹತ್ಯೆ ಮಾಡಲಾಗಿತ್ತು. ಪಾಕಿಸ್ತಾನಿ ಭಯೋತ್ಪಾದಕರು ಮಾತ್ರ ನಡೆಸಿದ್ದರು. ಈ ಯೋಜನೆಯಲ್ಲಿ ಯಾವುದೇ ಕಾಶ್ಮೀರಿ ಭಯೋತ್ಪಾದಕರನ್ನು ಸೇರಿಸಿಕೊಂಡಿರಲಿಲ್ಲ ಎಂದು ಗುಪ್ತಚರ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

    ಪಹಲ್ಗಾಮ್ ದಾಳಿಯು 26/11 ಮುಂಬೈ ದಾಳಿಯಂತೆಯೇ ಎಲ್‍ಇಟಿ-ಐಎಸ್‍ಐ ಯೋಜನೆಯಾಗಿತ್ತು. ಪಾಕಿಸ್ತಾನಿ ಬೇಹುಗಾರಿಕೆ ಸಂಸ್ಥೆ ಲಷ್ಕರ್ ಕಮಾಂಡರ್ ಸಾಜಿದ್ ಜಟ್‍ಗೆ ವಿದೇಶಿ ಭಯೋತ್ಪಾದಕರನ್ನು ಮಾತ್ರ ಸೇರಿಸಿಕೊಳ್ಳುವಂತೆ ಮತ್ತು ಯೋಜನೆಯಲ್ಲಿ ಕನಿಷ್ಠ ಸ್ಥಳೀಯ ಒಳಗೊಳ್ಳುವಿಕೆಯನ್ನು ಹೊಂದಿರುವಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದರು ಎಂದು ತಿಳಿದುಬಂದಿದೆ.

    ಪಾಕಿಸ್ತಾನದ ಮಾಜಿ ವಿಶೇಷ ಪಡೆಗಳ ಕಮಾಂಡೋ ಸುಲೈಮಾನ್ ಈ ದಾಳಿಯ ನೇತೃತ್ವ ವಹಿಸಿದ್ದ ಎಂದು ಹೇಳಲಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಭಯೋತ್ಪಾದಕ ಸಂಘಟನೆಯ ಪ್ರಧಾನ ಕಚೇರಿ ಇರುವ ಮುರಿಡ್ಕೆಯಲ್ಲಿ ಲಷ್ಕರ್ ಭಯೋತ್ಪಾದಕರಿಗೆ ತರಬೇತಿ ನೀಡುತ್ತಿದ್ದ ಅವರು 2022ರಲ್ಲಿ ಜಮ್ಮು ಪ್ರದೇಶದ ನಿಯಂತ್ರಣ ರೇಖೆಯನ್ನು ದಾಟಿದ್ದರು.

    ದಾಳಿ ನಡೆಸಿದ ತಂಡದಲ್ಲಿ ಇತರ ಇಬ್ಬರು ಪಾಕಿಸ್ತಾನಿಗಳು ಕೂಡ ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಈ ವರದಿಯ ಪ್ರಕಾರ, ಏಪ್ರಿಲ್ 2023ರಲ್ಲಿ ಪೂಂಚ್‍ನಲ್ಲಿ ಭಾರತೀಯ ಸೇನಾ ಟ್ರಕ್ ಮೇಲೆ ನಡೆದ ದಾಳಿಯಲ್ಲಿ ಸುಲೈಮಾನ್ ಕೂಡ ಭಾಗಿಯಾಗಿದ್ದ, ಇದರಲ್ಲಿ ಐದು ಸೈನಿಕರು ಸಾವನ್ನಪ್ಪಿದ್ದರು.

    ಬಳಿಕ ಆತ ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ಗುರುತುಗಳನ್ನು ಮೂಲಗಳು ಬಹಿರಂಗಪಡಿಸಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading