Tuesday, September 1, 2026
spot_img
More
    spot_img
    HomeLatest newsಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಿ ಎಂದ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ; ಪರಮೇಶ್ವರ್‌ ಪ್ರತಿಕ್ರಿಯೆ

    ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಿ ಎಂದ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ; ಪರಮೇಶ್ವರ್‌ ಪ್ರತಿಕ್ರಿಯೆ

    ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದು, ಬೆದರಿಕೆ ಕರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವುದಕ್ಕೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಆರ್‌ಎಸ್‌ಎಸ್‌ ಬ್ಯಾನ್‌ ಬಗ್ಗೆ ಸಿಎಂಗೆ ಪತ್ರ ಬರೆದಿದ್ದಾರೆ. ಇದರ ಬಗ್ಗೆ ಸರ್ಕಾರ ತೀರ್ಮಾನವನ್ನು ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಏನು ಹೇಳುವುದಕ್ಕೆ ಅಗುವುದಿಲ್ಲ ಎಂದರು.

    ಇನ್ನು ಜೆಡಿಎಸ್ ಶಾಸಕರಿಗೆ ಅನುದಾನ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲರಿಗೂ ಅನುದಾನ ಕೊಡುತ್ತಿದ್ದೇವೆ. ಬಿಜೆಪಿ ಅವರು ಈ ಹಿಂದೆ ಏನು ಮಾಡಿದ್ರು ಅಂತ ಅವರು ನೆನಪು ಮಾಡಿಕೊಳ್ಳಲ್ಲಿ. ನಾವು ಆ ರೀತಿ ಯಾರಿಗೂ ತಾರತಮ್ಯ ಮಾಡುವುದಿಲ್ಲ‌ ಎಂದು ಹೇಳಿದರು.

    ಇನ್ನು ಐಟಿ ಕಂಪನಿಗಳು ಬೇರೆಡೆ ಸ್ಥಳಾಂತರವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಸ್ತೆ ಹಾಳಗಿದೆ ಎನ್ನುವ ಸಮಸ್ಯೆ ಇದ್ದರೆ ಇದನ್ನು ಸರಿ ಮಾಡುತ್ತೇವೆ. ಬೆಂಗಳೂರಿನ ಗುಂಡಿ ಮುಚ್ಚುವುದಕ್ಕೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅದೇಶ ನೀಡಿದ್ದಾರೆ. ಐಟಿ ಅವರ ಸಮಸ್ಯೆ ಏನಿದೆ ಅದನ್ನು ಬಗೆಹರಿಸುತ್ತೇವೆ. ಅವರಿಗೆ ತಿಳಿ ಹೇಳುವ ಕೆಲಸ ಮಾಡುತ್ತೇವೆ. ಕರ್ನಾಟಕಕ್ಕೆ ಯಾರೇ ಬಂದರು ಅವರಿಗೆ ಬಂಡವಾಳ ಹೂಡುವುದಕ್ಕೆ ಬೇಕಾದ ಸಹಾಯ ಮಾಡುತ್ತೇವೆ. ಗೂಗಲ್ ಅವರು ಅವರದ್ದೇ ಕಾರಣಕ್ಕೆ ಆಂಧ್ರಕ್ಕೆ ಹೋಗಿದ್ದಾರೆ. ಕೇವಲ ರಸ್ತೆ ವಿಚಾರಕ್ಕೆ ಅಲ್ಲಿಗೆ ಹೋಗಿಲ್ಲ. ಹಾಗಾಗಿದ್ರೆ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಮಾಡಿ 10 ಲಕ್ಷ ಕೋಟಿ ಹೂಡಿಕೆ ಮಾಡುವುದಕ್ಕೆ ಸಹಿ ಮಾಡುತ್ತಿರಲಿಲ್ಲ ಎಂದು ಹೇಳಿದರು.

    1200 ಚದರಡಿಯ ಮನೆಗಳಿಗೆ ‘ಓಸಿ’ ವಿನಾಯಿತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading