Saturday, August 8, 2026
spot_img
More
    spot_img
    HomeTop Storyರಾಷ್ಟ್ರೀಯ ಹೆದ್ದಾರಿಗಳಲ್ಲಿ ಬರಲಿದೆ ಮಾಸಿಕ ಹಾಗೂ ವಾರ್ಷಿಕ ಟೋಲ್‌ ಪಾಸ್‌

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬರಲಿದೆ ಮಾಸಿಕ ಹಾಗೂ ವಾರ್ಷಿಕ ಟೋಲ್‌ ಪಾಸ್‌

    ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್‍ಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

    Advertisement

    ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಅವರು, ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇ. 26 ರಷ್ಟಿವೆ ಎಂದು ಹೇಳಿದ್ದಾರೆ. ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗದಂತೆ ಹಳ್ಳಿಗಳ ಹೊರಗೆ ಟೋಲ್ ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

    ಟೋಲ್ ಆದಾಯದ ಶೇ.74 ರಷ್ಟು ವಾಣಿಜ್ಯ ವಾಹನಗಳಿಂದ ಬರುತ್ತದೆ. ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್‍ಗಳನ್ನು ಪರಿಚಯಿಸುವ ಬಗ್ಗೆ ನಾವು ಪರಿಗಣಿಸುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಒಟ್ಟು ಟೋಲ್ ಸಂಗ್ರಹದಲ್ಲಿ ಖಾಸಗಿ ವಾಹನಗಳು ಕೇವಲ ಶೇ.26 ರಷ್ಟಿದ್ದು, ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

    ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ ಜಿಎನ್‍ಎಸ್‍ಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯೊಂದಿಗೆ ಫಾಸ್ಟ್‍ಟ್ಯಾಗ್ ಸೌಲಭ್ಯ ಜಾರಿಗೆ ತರಲು ನಿರ್ಧರಿಸಿದೆ ಎಂದಿದ್ದಾರೆ.

    ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ (ಜಿಎನ್‍ಎಸ್‍ಎಸ್) ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಪ್ರಸ್ತುತ ಟೋಲ್ ಸಂಗ್ರಹ ವ್ಯವಸ್ಥೆಗಿಂತ ಉತ್ತಮವಾಗಿರುತ್ತದೆ. ಕಳೆದ ವರ್ಷ ಜುಲೈನಲ್ಲಿ, ಕರ್ನಾಟಕದ ಎನ್‍ಎಚ್ -275 ರ ಬೆಂಗಳೂರು-ಮೈಸೂರು ವಿಭಾಗ ಮತ್ತು ಹರಿಯಾಣದ ಎನ್‍ಎಚ್ -709 ರ ಪಾಣಿಪತ್-ಹಿಸಾರ್ ವಿಭಾಗದಲ್ಲಿ ಜಿಎನ್‍ಎಸ್‍ಎಸ್ ಆಧಾರಿತ ಬಳಕೆದಾರ ಶುಲ್ಕ ಸಂಗ್ರಹ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಾಯೋಗಿಕ ಅಧ್ಯಯನವನ್ನು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading