Friday, August 7, 2026
spot_img
More
    spot_img
    HomeTop Storyಕಾಂಗ್ರೆಸ್‌ನಲ್ಲಿ ತಾರಕಕ್ಕೇರಿದ ಅಧ್ಯಕ್ಷ ಪಟ್ಟ ಫೈಟ್: ನಾನು ಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದೆ ಎಂದ ಪರಮೇಶ್ವರ್‌

    ಕಾಂಗ್ರೆಸ್‌ನಲ್ಲಿ ತಾರಕಕ್ಕೇರಿದ ಅಧ್ಯಕ್ಷ ಪಟ್ಟ ಫೈಟ್: ನಾನು ಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದೆ ಎಂದ ಪರಮೇಶ್ವರ್‌

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್‌ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ.

    Advertisement

    ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್‌ನ ಒಳಜಗಳ ಶಮನ ಮಾಡಲು ರಾಜ್ಯದ ನಾಯಕರಿಗೆ ವಾರ್ನ್‌ ಮಾಡಿದ್ದರು. ಆದರೆ ಸುರ್ಜೇವಾಲಾ ಅವರ ವಾರ್ನ್‌ಗೆ ಯಾವುದೇ ಸಚಿವರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್‌ನಲ್ಲಿ ಅಧಿಕಾರ ದಾಹ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.

    ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಹೊಣೆಯೂ ಅವರ ಮೇಲಿದೆ. ಹಾಗಾಗಿ ಒಂದು ಹುದ್ದೆ ಬಿಟ್ಟರೆ ಒಳ್ಳೆಯದು ಎಂದು ಹೇಳುವ ಮೂಲಕ ಒಂದು ಹುದ್ದೆಯ ಪರ ಬ್ಯಾಟ್‌ ಬೀಸಿದ್ದಾರೆ.

    ಅಂದು ನನಗೂ ಮಂತ್ರಿ ಅಥವಾ ಅಧ್ಯಕ್ಷ ಸ್ಥಾನದ ಪೈಕಿ ಒಂದು ಹುದ್ದೆಗೆ ಅವಕಾಶ ನೀಡಿದ್ದರು. ನಾನು ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿದ್ದೆ. ಡಿಕೆ ಶಿವಕುಮಾರ್‌ ಈಗ ಡಿಸಿಎಂ ಹಾಗೂ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಬ್ದಾರಿಯೂ ಸಹ ಇದೆ. ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.

    ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಬೇರೆಯವರು ಎಂದು ಹೇಳುತ್ತಾರೆ. ನನಗೂ ಈಗೆ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎನ್ನುವುದನ್ನು ಹೈಕಮಾಂಡ್‌ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೈಕಮಾಂಡ್‌ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading