Friday, August 7, 2026
spot_img
More
    spot_img
    HomeTop StoryIPL 2025: ಅಂತಿಮ ಹಂತದಲ್ಲಿ ಅಬ್ಬರಿಸಿದ ಸ್ಟಬ್ಸ್, ಅಕ್ಷರ್; ರಾಜಸ್ಥಾನ್‌ಗೆ ಸವಾಲಿನ ಗುರಿ

    IPL 2025: ಅಂತಿಮ ಹಂತದಲ್ಲಿ ಅಬ್ಬರಿಸಿದ ಸ್ಟಬ್ಸ್, ಅಕ್ಷರ್; ರಾಜಸ್ಥಾನ್‌ಗೆ ಸವಾಲಿನ ಗುರಿ

    ದೆಹಲಿ: ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿದ್ದು, ರಾಜಸ್ಥಾನ್ ರಾಯಲ್ಸ್‌ಗೆ 189 ರನ್‌ಗಳ ಗುರಿ ನೀಡಿದೆ.

    Advertisement

    ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್ 9 ರನ್, ಅಭಿಷೇಕ್ ಪೊರೆಲ್ 49 (37), ಕರುಣ್ ನಾಯರ್ ಡಕ್‌ಔಟ್, ಕೆಎಲ್ ರಾಹುಲ್ 38 (32), ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 34, ಅಶುತೋ‍ಷ್ ಶರ್ಮಾ ಅಜೇಯ 15 (11) ರನ್ ಹಾಗೂ ಟ್ರಿಸ್ಟನ್ ಸ್ಟಬ್ಸ್ 18 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಅಜೇಯ 34 ರನ್ ಬಾರಿಸಿದರು.

    ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್ ಎರಡು ವಿಕೆಟ್, ತೀಕ್ಷಣ ಹಾಗೂ ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading