Saturday, August 8, 2026
spot_img
More
    spot_img
    HomeLatest newsಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಭೂಷಣ್ ರಾಮಕೃಷ್ಣ ಗವಾಯಿ

    ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಭೂಷಣ್ ರಾಮಕೃಷ್ಣ ಗವಾಯಿ

    ನವದೆಹಲಿ ;ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (CJI) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬುಧವಾರ (ಏಪ್ರಿಲ್ 16) ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.ಮೇ 13 ರಂದು ಹಾಲಿ ಸಿಜೆಐ ಸಂಜೀವ್ ಖನ್ನಾ ನಿವೃತ್ತಿ ಹೊಂದಲಿದ್ದಾರೆ. ಅವರ ನಿವೃತ್ತಿಯ ನಂತರ, ಮೇ 14 ರಂದು ನ್ಯಾಯಮೂರ್ತಿ ಗವಾಯಿ ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಲಿದ್ದಾರೆ. ಅವರು ಹಾಲಿ ಸಿಜೆಐ(CJI) ಖನ್ನಾ ನಂತರದ ಎರಡನೇ ಅತ್ಯುನ್ನತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.ಕಳೆದ ವರ್ಷದ ನವೆಂಬರ್ 11 ರಂದು ಸಂಜೀವ್ ಖನ್ನಾ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ನಿವೃತ್ತಿ ವಯಸ್ಸು 65 ವರ್ಷವಾಗಿರುತ್ತದೆ.ಮೇ 24, 2019 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಆರು ತಿಂಗಳಿಗಿಂತ ಹೆಚ್ಚು ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಅವರು ನವೆಂಬರ್ 23, 2025 ರಂದು ನಿವೃತ್ತರಾಗಲಿದ್ದಾರೆ.

    Advertisement

    ನ್ಯಾಯಮೂರ್ತಿ ಗವಾಯಿ ಅವರು, 2007 ರಲ್ಲಿ ದೇಶದ ಉನ್ನತ ನ್ಯಾಯಾಂಗ ಹುದ್ದೆಗೆ ಬಡ್ತಿ ಪಡೆದ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನಂತರ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗುತ್ತಿರುವ ಎರಡನೇ ದಲಿತ ವ್ಯಕ್ತಿಯಾಗಲಿದ್ದಾರೆ.1960ರ ನವೆಂಬರ್ 24ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಜನಿಸಿದ ಭೂಷಣ್ ರಾಮಕೃಷ್ಣ ಗವಾಯಿ, 1985ರ ಮಾರ್ಚ್ 16ರಂದು ವಕೀಲರಾಗಿ ಕಾನೂನು ವೃತ್ತಿಗೆ ಪ್ರವೇಶಿಸಿದರು. ವಕೀಲರಾಗಿ ಪ್ರಾರಂಭಿಕ ಅವಧಿಯಲ್ಲಿ, ಅವರು ಮುಂಬೈನ ಮಾಜಿ ಅಡ್ವೊಕೇಟ್ ಜನರಲ್ ಮತ್ತು ಹೈಕೋರ್ಟ್ ನ್ಯಾಯಾಧೀಶರಾಗಿದ್ದ ದಿವಂಗತ ಬಾರ್ ರಾಜಾ ಎಸ್. ಭೋಸಲೆ ಅವರ ಅಡಿಯಲ್ಲಿ 1987 ರವರೆಗೆ ಕೆಲಸ ಮಾಡಿದರು.ನಂತರ 1987ರಿಂದ 1990ರ ತನಕ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರ ವಕೀಲರಾಗಿಯೂ ಸೇವೆ ಸಲ್ಲಿಸಿದರು. 1990ರ ನಂತರ, ಗವಾಯಿ ಅವರು ಮುಖ್ಯವಾಗಿ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಸಾಂವಿಧಾನಿಕ ಮತ್ತು ಆಡಳಿತಾತ್ಮಕ ಕಾನೂನಿನಲ್ಲಿ ಪರಿಣತಿ ಹೊಂದಿ ತನ್ನ ವಕೀಲ ವೃತ್ತಿಯನ್ನು ಮುಂದುವರೆಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading