Wednesday, September 2, 2026
spot_img
More
    spot_img
    HomeLatest newsರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣ: ಮಾಜಿ ಸಚಿವ ಬೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌

    ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣ: ಮಾಜಿ ಸಚಿವ ಬೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್‌ ಹೆಸರು ತಳುಕು ಹಾಕಿಕೊಂಡಿದ್ದು, ಮೃತನ ತಾಯಿ ವಿಜಯಲಕ್ಷ್ಮೀ ನೀಡಿರುವ ದೂರಿನ ಮೇರೆಗೆ ಭೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    Advertisement

    ಭಾರತೀನಗರ ಠಾಣೆಯಲ್ಲಿ ಭೈರತಿ ಬಸವರಾಜ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಭೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್‌ ಶಿವಪ್ರಕಾಶ್‌ ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ 8-9 ಜನರು ಶಿವಪ್ರಕಾಶ್‌ಗೆ ಬೆದರಿಕೆ ಹಾಕಿದ್ದರು. ಭೈರತಿ ಬಸವರಾಜ್‌ ಸೇರಿದಂತೆ ಹಲವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಲವು ಬಾರಿ ಮಗ ಹೇಳುತ್ತಿದ್ದ ಎಂದು ತಾಯಿ ವಿಜಯಲಕ್ಷ್ಮೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಇನ್ನು ಈ ಪ್ರಕರಣ ಸಂಬಂಧ ಮಾತನಾಡಿರುವ ಮಾಜಿ ಸಚಿವ ಭೈರತಿ ಬಸವರಾಜ್‌ ಅವರು, ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂಬುದೂ ನನಗೆ ಗೊತ್ತಿಲ್ಲ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ. ಸುಖಾ‌ ಸುಮ್ಮನೆ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಎಫ್‌ಐಆರ್‌ ದಾಖಲಿಸಬಹುದಾ? ಎಫ್‌ಐಆರ್‌ ದಾಖಲಿಸುವಾಗ ನನಗೆ ಮಾಹಿತಿ ಕೂಡ ನೀಡಿಲ್ಲ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

    40ರ ನಂತರ ಆರೋಗ್ಯ ಚೆನ್ನಾಗಿರಬೇಕಾ? ಈ ರೂಟಿನ್ ತಪ್ಪದೇ ಫಾಲೋ ಮಾಡಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading