ಮಂಗಳೂರು: ಕುಮಾರಸ್ವಾಮಿ ಹಾಗೂ ಜಮೀರ್ ಅಹ್ಮದ್ ನಡುವೆ ಚನ್ನಪಟ್ಟಣ ಉಪಚುನಾವಣೆಯಿಂದಲೂ ವಾಕ್ಸಮರ ನಡೆಯುತ್ತಿದ್ದು, ಚುನಾವಣೆ ಮುಗಿದ ನಂತರವೂ ಇದು ಮುಂದುವರಿದಿದೆ. ಜಮೀರ್ ಅಹ್ಮದ್ ಖಾನ್ ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಕುರಿತಾಗಿ ನೀಡಿರುವ ಹೇಳಿಕೆ ಕುರಿತು ಪ್ರತಿಭಟನೆಗಳೂ ಸಹ ನಡೆದಿವೆ.
ಸದ್ಯ ಈ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಜಮೀರ್ ಅಹ್ಮದ್ ಒಕ್ಕಲಿಗರ ಬಗ್ಗೆ ನನಗೆ ಗೌರವವಿದೆ, ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ಕರಿಯ ಎಂದು ಕುಮಾರಸ್ವಾಮಿ ಅವರನ್ನು ನಿಂದಿಸಿದ್ದರ ಕುರಿತು ಮಾತನಾಡಿದ ಜಮೀರ್ ನಾನು ದೇವೇಗೌಡರ ಕುಟುಂಬವನ್ನು ಖರೀದಿ ಮಾಡ್ತೀನಿ ಅಂತ ಹೇಳಿಲ್ಲ. ಕುಮಾರಸ್ವಾಮಿ ಅವರು ಮುಸ್ಲಿಂ ಮತ ನನಗೆ ಬೇಕಾಗಿಲ್ಲ ಎಂದರು. ಈ ಹಿನ್ನಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ವೋಟ್ ಬೇಡ ಎಂದು ಹೇಳಿಎ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಲ್ಲ ಇದು ಎಷ್ಟು ಸರಿ ಅಂತ ಕೇಳಿದ್ದು ಎಂದು ಹೇಳಿದರು.
ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವವರು ಎಂದು ಲಘುವಾಗಿ ಮಾತನಾಡುತ್ತಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ವೋಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ನನ್ನ ಪ್ರಶ್ನೆ. ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದು ಹೇಳಿಕೆ ನೀಡಿದರು.
ಇನ್ನು ತಾವು ಜನತಾದಳ ಸೇರಿದ ದಿನಗಳ ಕುರಿತು ಮೆಲುಕು ಹಾಕಿದ ಜಮೀರ್ ಅಹ್ಮದ್ ನಾನು ಜನತಾದಳಕ್ಕೆ ಬರಲು ಕಾರಣ ಆದಿ ಚುಂಚನಗಿರಿ ಸ್ವಾಮೀಜಿ, ನಾನು ಮಠದ ಹುಡುಗ, ಆದಿಚುಂಚನಗಿರಿ ಮಠದಲ್ಲಿ ಬೆಳದವನು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗೆಯಿಂದ ಸಂಜೆವರೆಗೂ ಮಠದಲ್ಲಿಯೇ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು ಬೇಕಿದ್ದರೆ ಕುಮಾರಸ್ವಾಮಿ ಅವರನ್ನೇ ಕೇಳಿ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


