Saturday, August 8, 2026
spot_img
More
    spot_img
    HomeEntertainmentZEE5 ಮತ್ತೊಂದು ಸಾಹಸ; ಏ.25ರಿಂದ ʼಅಯ್ಯನ ಮನೆʼ ಮಿನಿ ವೆಬ್ ಸೀರೀಸ್ ಸ್ಟ್ರೀಮಿಂಗ್!

    ZEE5 ಮತ್ತೊಂದು ಸಾಹಸ; ಏ.25ರಿಂದ ʼಅಯ್ಯನ ಮನೆʼ ಮಿನಿ ವೆಬ್ ಸೀರೀಸ್ ಸ್ಟ್ರೀಮಿಂಗ್!

    ಭಾರತೀಯ ಚಿತ್ರರಂಗದ ಹೆಸರಾಂತ ಒಟಿಟಿ ಫ್ಲಾರ್ಟ್ ಫಾರಂಗಳಲ್ಲೊಂದು ZEE5. ಹಲವು ಸೂಪರ್ ಹಿಟ್ ಸಿನಿಮಾಗಳು ಈ ಒಟಿಟಿ ಫ್ಲಾರ್ಟ್ ನಲ್ಲಿ ಲಭ್ಯವಿದೆ. ಇದೀಗ ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಕನ್ನಡ ಸಿನಿಮಾಪ್ರೇಮಿಗಳಿಗಾಗಿ ಮಿನಿ ವೆಬ್ ಸೀರೀಸ್ ನ್ನು ಪರಿಚಯಿಸಿದೆ. ZEE5 ನಿಂದ ಬರ್ತಿರುವ ಮೊದಲ ಕನ್ನಡ ಮಿನಿ ವೆಬ್ ಸೀರೀಸ್ ನ್ನು ಖ್ಯಾತ ನಿರ್ದೇಶಕ ಹಾಗೂ ಕಲಾವಿದರ ರಮೇಶ್ ಇಂದಿರಾ ನಿರ್ಮಾಣ ಮಾಡಿದ್ದಾರೆ. ಆ ಸೀರೀಸ್ ಗೆ ಅಯ್ಯನ ಮನೆ ಎಂದು ಟೈಟಲ್ ಇಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ.

    Advertisement

    ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರ್ತಿರುವ ʼಅಯ್ಯನ ಮನೆʼ ವೆಬ್ ಸೀರೀಸ್ ಗೆ ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್ ನಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿ ಘರ್ಷಿಸುವ ಕಥೆಯನ್ನೊಳಗೊಂಡಿದ್ದು, ಇದೇ ತಿಂಗಳ 25ರಿಂದ ZEE5ನಲ್ಲಿ ಸ್ಟ್ರೀಮಿಂಗ್ ಆಗಲಿದೆ.
    ಚಿಕ್ಕಮಗಳೂರಿನ ಅಯ್ಯನ ಮನೆ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರೀ ಕಥೆಯೊಳಗೊಂಡಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಎಕ್ಸೈಟ್ ಆಗುವಂತೆ ಮಾಡುತ್ತದೆ. ಈಗಾಗಲೇ ಹಲವು ಹಿಟ್ ಚಿತ್ರ ಕೊಟ್ಟುರುವ ರಮೇಶ್ ಇಂದಿರಾ ಹೊಸ ಬಗೆಯ ಕಥೆಯ ಮೂಲಕ ಒಟಿಟಿ ಪ್ರೇಕ್ಷಕರನ್ನು ತಲುಪಲಿದ್ದಾರೆ.

    ಅಯ್ಯನ ಮನೆ ವೆಬ್ ಸೀರೀಸ್ ಬಗ್ಗೆ ನಿರ್ದೇಶಕರಾದ ರಮೇಶ್ ಇಂದಿರಾ ಮಾತನಾಡಿ, ಅಯ್ಯನ ಮನೆ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ಅಯ್ಯನ ಮನೆ ವೆಬ್ ಸರಣಿ ಪ್ರೇಕ್ಷಕರನ್ನು ಸೀಟಿನ ತುದಿಗೆ ಕುರುವಂತೆ ಮಾಡುತ್ತದೆ ಎಂದರು.

    ಜಾಜಿ ಪಾತ್ರ ಮಾಡಿರುವ ಖುಷಿ ರವಿ ಮಾತನಾಡಿ, ಮುಗ್ದತೆ, ಗಂಡನ ಪ್ರೀತಿಯ ಹೆಂಡತಿ, ಸಂಪ್ರದಾಯಕ್ಕೆ ನಡೆದುಕೊಳ್ಳುವ ಹೆಣ್ಣು ಮಗಳಾಗಿ ನಟಿಸಿದ್ದೇನೆ. ಇದೊಂದು ಎಮೋಷನ್ ಪಯಣ. ಜೊತೆಗೆ ಅನೇಕ ರಹಸ್ಯಗಳ ಕಥಾಹಂದರ. ನಾನು ವೆಬ್ ಸರಣಿ ನೋಡಲು ಕಾತರಳಾಗಿದ್ದೇನೆ ಎಂದು ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading