Friday, August 7, 2026
spot_img
More
    spot_img
    HomeLatest newsಇಂದೇ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಚರ್ಚೆ; ಎಷ್ಟು ಗಂಟೆಗೆ ಆರಂಭ?

    ಇಂದೇ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಚರ್ಚೆ; ಎಷ್ಟು ಗಂಟೆಗೆ ಆರಂಭ?

    ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಹಾಗೂ ವಿವಾದವನ್ನು ಹುಟ್ಟುಹಾಕಿರುವ ಜಾತಿ ಗಣತಿ ವರದಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಕೈ ಸೇರಿದೆ. ಮೂರು ದಿನಗಳ ಹಿಂದೆಯೇ ಸಚಿವರಿಗೆ ಜಾತಿಗಣತಿಯಲ್ಲಿನ ಅಂಶಗಳನ್ನು ಅಧ್ಯಯನ ಮಾಡಿಕೊಂಡು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಸಿದ್ಧರಾಗಿ ಎಂದು ಸಿದ್ದರಾಮಯ್ಯ ಕರೆಕೊಟ್ಟಿದ್ದರು.

    Advertisement

    ಅಲ್ಲಿಂದ ಇಲ್ಲಿಯವರೆಗೆ ಜಾತಿಗಣತಿ ವರದಿ ಪರ ವಿರೋಧ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಲೇ ಇದ್ದು, ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ನಾಯಕರಿಂದ ವರದಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

    ಅತ್ತ ಸಮುದಾಯದ ಅಧ್ಯಕ್ಷರು ಜಾತಿಗಣತಿ ವರದಿಯಲ್ಲಿ ಸೋರಿಕೆಯಾಗಿದೆ ಎನ್ನಲಾದ ಜಾತಿ ಜನಸಂಖ್ಯೆ ಅಂಕಿಅಂಶಗಳನ್ನು ವಿರೋಧಿಸುತ್ತಿದ್ದು, ಇದು ಅವೈಜ್ಞಾನಿಕ ಮತ್ತೊಮ್ಮೆ ಹೊಸದಾಗಿ ಜಾತಿಗಣತಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

    ಇನ್ನು ಈ ಯಾವುದೇ ಟೀಕೆಗೂ ಕಿವಿಗೊಡದ ಸಿದ್ದರಾಮಯ್ಯ ಚರ್ಚೆ ನಡೆಯಲಿ ತದನಂತರ ವರದಿಯ ಬಗ್ಗೆ ಮಾತನಾಡೋಣ, ಸಚಿವ ಸಂಪುಟ ಸಭೆಯಾಗುವವರೆಗೂ ಅದರ ಬಗ್ಗೆ ಚರ್ಚೆ ಮಾಡಲ್ಲ ಎಂದಿದ್ದರು.

    ಹೀಗೆ ಸಿದ್ದರಾಮಯ್ಯ ಜಾತಿಗಣತಿ ವರದಿಗೆಂದೇ ಇಂದಿನ ( ಏಪ್ರಿಲ್ 17 ) ಸಚಿವ ಸಂಪುಟ ಸಭೆಯನ್ನು ನಿಶ್ಚಯಿಸಿದ್ದು, ಸದ್ಯ ಕೇಂದ್ರದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ನಾಯಕರು ಭಾಗಿಯಾಗಿದ್ದಾರೆ. ಈ ಪ್ರತಿಭಟನೆ ಮುಗಿದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಜಾತಿಗಣತಿ ಕುರಿತಾದ ಚರ್ಚೆ ಆರಂಭವಾಗಲಿದ್ದು, ಸಭೆಯ ಬಳಿಕ ಏನೆಲ್ಲ ಅಭಿಪ್ರಾಯಗಳನ್ನು ಸಚಿವರು ವ್ಯಕ್ತಪಡಿಸಲಿದ್ದಾರೆ ಹಾಗೂ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading