ಬೆಂಗಳೂರು: ಜೂನ್ 4ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ( ಜುಲೈ 17 ) ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ದೊಡ್ಡ ಹೆಜ್ಜೆಯನ್ನಿಡಲು ತೀರ್ಮಾನಿಸಿದೆ.
ಚಿನ್ನಸ್ವಾಮಿ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಕಾರಣ ಅದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ತಂಡ ಈ ವರದಿಯನ್ನು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿಯನ್ನು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸ್ವಾಗತಿಸಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರವಲ್ಲದೇ ಕೆಎಸ್ಸಿಎ ವಿರುದ್ಧವೂ ಸಹ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧರಿಸಲಾಗಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲು ತೀರ್ಮಾನಿಸಲಾಗಿದೆ.
ಕಾಲ್ತುಳಿತಕ್ಕೆ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ನೇರ ಹೊಣೆ ಎಂದು ಉಲ್ಲೇಖಿಸಲಾಗಿದ್ದು, ಪೊಲೀಸರು ಸಹ ನೇರ ಹೊಣೆ ಎನ್ನಲಾಗಿದೆ. ಕಾರ್ಯಕ್ರಮ ನಡೆಸುವುದು ಅಸಾಧ್ಯವೆಂದು ಗೊತ್ತಿದ್ದರೂ ಸಹ ಕಾರ್ಯಕ್ರಮ ಮಾಡಿದ್ದಾರೆ ಹೀಗಾಗಿ ಎಲ್ಲರೂ ನೇರ ಹೊಣೆ, ಬಂದೋಬಸ್ತ್ ಇರಲಿಲ್ಲ, ಕ್ರೀಡಾಂಗಣದಲ್ಲಿ ಕೇವಲ 79 ಪೊಲೀಸರಿದ್ದರೆ, ಹೊರಗೆ ಪೊಲೀಸ್ ಇರಲಿಲ್ಲ ಹಾಗೂ ಆಂಬುಲೆನ್ಸ್ ಸಹ ಇರಲಿಲ್ಲ. ಕಾಲ್ತುಳಿತ 3.25ಕ್ಕೆ ಸಂಭವಿಸಿದೆ, ಕಮಿಷನರ್ಗೆ 5.30 ಆದರೂ ವಿಷಯ ತಿಳಿದಿರಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ದೇಶದ ಸ್ವಚ್ಛ ನಗರಗಳ ಪಟ್ಟಿ ಪ್ರಕಟ; ಟಾಪ್ 10ರಲ್ಲಿ ಸ್ಥಾನ ಗಿಟ್ಟಿಸಿದ ಮೈಸೂರು
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


