Thursday, September 3, 2026
spot_img
More
    spot_img
    HomeLatest newsಬಿಹಾರ ದೇಶದಲ್ಲೇ ಅತ್ಯಂತ ಭ್ರಷ್ಟ ರಾಜ್ಯ; ಸಚಿವ ಸಂತೋಷ್‌ ಲಾಡ್‌

    ಬಿಹಾರ ದೇಶದಲ್ಲೇ ಅತ್ಯಂತ ಭ್ರಷ್ಟ ರಾಜ್ಯ; ಸಚಿವ ಸಂತೋಷ್‌ ಲಾಡ್‌

    ಬೆಂಗಳೂರು: ಚುನಾವಣೆ ಬಂದಾಗ ಬಿಜೆಪಿಯವರು ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷದಿಂದ ಬಿಹಾರದಲ್ಲಿ ಬಿಜೆಪಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ದೇಶದಲ್ಲಿ ಅತ್ಯಂತ ಭ್ರಷ್ಟ ರಾಜ್ಯ ಬಿಹಾರವಾಗಿದೆ ಎಂದು ಟೀಕಿಸಿದರು.

    ಜಿಎಸ್‍ಟಿ ಸಂಗ್ರಹ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣವಿದ್ದು, ಶಿಕ್ಷಣ, ಕೈಗಾರಿಕೆಯಲ್ಲೂ ಹಿಂದುಳಿದಿದೆ. ದಕ್ಷಿಣ ರಾಜ್ಯಗಳಿಗೆ ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯವನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ನಮ್ಮ ಪಾಲಿನ ಜಿಎಸ್‍ಟಿ ಹಣವು ಅಲ್ಲಿಗೆ ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಇಷ್ಟೆಲ್ಲಾ ಹಣ ಹೋದರೂ 15 ಸೇತುವೆಗಳು ಕುಸಿದುಬಿದ್ದಿವೆ. ಇದುವರೆಗೂ ಬಿಹಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಆಧಾರ್‌ ಕಾರ್ಡ್ ಅನ್ನು ವಿರೋಧಿಸಿತ್ತು. ನರೇಗ ಹಾಗೂ 5 ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿದ್ದರು. ಈಗ ಅವರೇ ಘೋಷಣೆ ಮಾಡಿದ್ದಾರೆ ಎಂದು ಬಿಹಾರದಲ್ಲಿ ಉಚಿತ ವಿದ್ಯುತ್ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದರು.

    ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ಅವಹೇಳನ ಮಾಡುತ್ತಿದ್ದರು. ಈಗ ಅವರೇ ಘೋಷಣೆ ಮಾಡಿದ್ದಾರೆ. ಜನಪರ ಕಾರ್ಯಕ್ರಮವಾಗಿರುವುದರಿಂದ ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಸ್ವಾಗತಿಸುತ್ತೇವೆ.

    ಬಿಹಾರದಲ್ಲಿ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ. ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿರಲು ಗ್ಯಾರಂಟಿ ಯೋಜನೆಗಳೇ ಕಾರಣ. ವಾರ್ಷಿಕ 56 ಸಾವಿರ ಕೋಟಿ ರೂ. ಗ್ಯಾರಂಟಿಗಾಗಿ ಖರ್ಚಾಗುತ್ತದೆ. ಇದರಿಂದ ಜಿಎಸ್‍ಟಿ ಸಂಗ್ರಹವು ಆಗುತ್ತದೆ. ರಾಜ್ಯದ ಆದಾಯದ ಹೆಚ್ಚಳಕ್ಕೂ ಕಾರಣವಾಗಲಿದೆ ಎಂದು ಸಮರ್ಥಿಸಿಕೊಂಡರು.

    ದೇಶದ ಸ್ವಚ್ಛ ನಗರಗಳ ಪಟ್ಟಿ ಪ್ರಕಟ; ಟಾಪ್‌ 10ರಲ್ಲಿ ಸ್ಥಾನ ಗಿಟ್ಟಿಸಿದ ಮೈಸೂರು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading