Friday, September 4, 2026
spot_img
More
    spot_img
    HomeLatest newsಕೆಲವರು ನಮಗೆ ಪರಮಾಣು ಬಾಂಬ್‌ ಬೆದರಿಕೆ ಹಾಕುತ್ತಿದ್ದಾರೆ, ನಮ್ಮ ಬಳಿಯೂ ಪರಮಾಣು ಬಾಂಬ್‌ ಇದೆ ಮರೆಯಬೇಡಿ...

    ಕೆಲವರು ನಮಗೆ ಪರಮಾಣು ಬಾಂಬ್‌ ಬೆದರಿಕೆ ಹಾಕುತ್ತಿದ್ದಾರೆ, ನಮ್ಮ ಬಳಿಯೂ ಪರಮಾಣು ಬಾಂಬ್‌ ಇದೆ ಮರೆಯಬೇಡಿ ಎಂದ ಮೋದಿ

    ಮಧ್ಯಪ್ರದೇಶ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತಿಕಾರವಾಗಿ ಭಾರತೀಯ ಸೇನಾಪಡೆ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಪರಮಾಣು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಮತ್ತೆ ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

    Advertisement

    ಮಧ್ಯಪ್ರದೇಶದ ಧರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿಯವರು, ಕೆಲವರು ಪರಮಾಣು ಬಾಂಬ್‍ಗಳನ್ನು ಇಟ್ಟುಕೊಂಡು ನಮ್ಮನ್ನು ಬ್ಲಾಕ್‍ಮೇಲ್ ಮಾಡಲು ಬರುತ್ತಿದ್ದಾರೆ. ಅವರಿಗೆ ಇಲ್ಲಿಂದಲೇ ನಾನು ಎಚ್ಚರಿಕೆ ಕೊಡುತ್ತೇನೆ. ಭಾರತವು ಕೂಡ ಪರಮಾಣು ರಾಷ್ಟ್ರ ಎಂಬುದನ್ನು ಮರೆಯಬೇಡಿ ಎಂದು ಗುಡುಗಿದರು.

    ಇದು ಹೊಸ ಭಾರತ. ಇದು ಯಾರಿಗೂ ಹೆದರುವುದಿಲ್ಲ. ಭಾರತೀಯ ಪಡೆಗಳು ಮನೆಗಳಿಗೆ ನುಗ್ಗಿ ಶತ್ರುಗಳನ್ನು ಹೊಡೆಯುವ ಶಕ್ತಿಯನ್ನು ಹೊಂದಿವೆ. ಹೊಸ ಭಾರತ ಪರಮಾಣು ಬೆದರಿಕೆಗಳಿಗೆ ಹೆದರುವುದಿಲ್ಲ. ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಭಾರತದೊಂದಿಗೆ ಭವಿಷ್ಯದ ಯುದ್ಧದಲ್ಲಿ ಇಸ್ಲಾಮಾಬಾದ್ ಅಸ್ತಿತ್ವದ ಬೆದರಿಕೆಯನ್ನು ಎದುರಿಸಿದರೆ ಪರಮಾಣು ಯುದ್ಧ ಮತ್ತು ಅರ್ಧ ಪ್ರಪಂಚವನ್ನು ನಾಶಮಾಡುವ ಬೆದರಿಕೆಯ ಬಗ್ಗೆ ನೀಡಿದ್ದ ಎಚ್ಚರಿಕೆಯನ್ನು ಅವರು ಸ್ಪಷ್ಟವಾಗಿ ಉಲ್ಲೇಖಿಸಿದರು.

    ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶೀರದಲ್ಲಿನ ತನ್ನ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಸಮಯದಲ್ಲಿ ನಷ್ಟವನ್ನು ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮದ್ (ಜೆಇಎಂ) ಒಪ್ಪಿಕೊಂಡಿರುವುದು ನವದೆಹಲಿಯ ವಿರುದ್ಧ ಭಯೋತ್ಪಾದನೆಯನ್ನು ಪ್ರಾಯೋಜಿಸುವಲ್ಲಿ ಇಸ್ಲಾಮಾಬಾದ್ ಪಾತ್ರವನ್ನು ಬಹಿರಂಗಪಡಿಸಿದೆ ಎಂದು ಅವರು ಹೇಳಿದರು.

    ಆಪರೇಷನ್ ಸಿಂಧೂರ್ ಸಮಯದಲ್ಲಿ ಬಹಾವಲ್ಪುರದಲ್ಲಿ ಭಾರತೀಯ ಪಡೆಗಳು ಜೈಶ್- ಎ- ಮೊಹಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬವನ್ನು ಛಿದ್ರ ಛಿದ್ರ ಮಾಡಿವೆ ಎಂದು ಜೆಇಎಂನ ಉನ್ನತ ಸದಸ್ಯ ಮಸೂದ್ ಇಲ್ಯಾಸ್ ಕಾಶೀರಿ ಹೇಳಿದ ಮರುದಿನವೇ ಮೋದಿ ಇದನ್ನು ಉಲ್ಲೇಖಿಸಿದ್ದಾರೆ.

    ಭಾರತದಲ್ಲಿರುವ ಕೋಟ್ಯಂತರ ತಾಯಂದಿರು ಮತ್ತು ಸಹೋದರಿಯರು ನನ್ನನ್ನು ಆಶೀರ್ವದಿಸುತ್ತಿದ್ದಾರೆ. ಧಾರ್ನಲ್ಲಿರುವ ದೇಶದ ಅತಿದೊಡ್ಡ ಸಮಗ್ರ ಜವಳಿ ಉದ್ಯಾನವನವು ಉದ್ಯಮಕ್ಕೆ ಹೊಸ ಶಕ್ತಿಯನ್ನು ಒದಗಿಸುತ್ತದೆ ಮತ್ತು ರೈತರ ಉತ್ಪನ್ನಗಳಿಗೆ ನ್ಯಾಯಯುತ ಮೌಲ್ಯವನ್ನು ನೀಡುತ್ತದೆ. 1948ರ ಈ ದಿನದಂದು, ನಮ್ಮ ಸೇನೆಯು ಹೈದರಾಬಾದ್ ಅನ್ನು ಸ್ವತಂತ್ರಗೊಳಿಸಿ ಭಾರತದ ಹೆಮೆಯನ್ನು ಪುನಃಸ್ಥಾಪಿಸಿದಾಗ ಸರ್ದಾರ್ ಪಟೇಲ್ ಅವರ ದೃಢವಾದ ಇಚ್ಛಾಶಕ್ತಿ ಕಂಡುಬಂದಿತು ಎಂದು ಹೈದರಾಬಾದ್ ವಿಮೋಚನಾ ದಿನವನ್ನು ಉಲ್ಲೇಖಿಸುತ್ತಾ ಅವರು ಹೇಳಿದರು.

    ಕಲ್ಯಾಣ ಕರ್ನಾಟಕದಲ್ಲಿ 5,267 ಶಿಕ್ಷಕರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading