ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತವಾದ ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯನವರನ್ನು 1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಸೋಲಿಸಿತು? 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು? ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆಯಾಗಿದೆ 7ಎಂದು ವಾಗ್ದಳಿ ನಡೆಸಿದ್ದಾರೆ.
ಇವಿಎಂಗಳಂತಹ ಆಧುನಿಕ ತಂತ್ರಜ್ಞಾನ ಬಂದಮೇಲೂ ಕಾಂಗ್ರೆಸ್ ಪಕ್ಷ ಇಂಥ ಚುನಾವಣಾ ಅಕ್ರಮ ಮಾಡುತ್ತದೆ ಎಂದರೆ, ಮತಪೆಟ್ಟಿಗೆ ಇದ್ದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎನ್ನುವುದನ್ನು ನೀವೇ ಊಹಿಸಿಕೊಳ್ಳಿ! ಕಾಂಗ್ರೆಸ್ ಪಕ್ಷ ಮತಗಳ್ಳತನದ ಮಾಫಿಯಾ ಎಂದು ಅವರು ಟೀಕಿಸಿದ್ದಾರೆ.
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


