Tuesday, September 1, 2026
spot_img
More
    spot_img
    HomeJobsರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 30,307 ಹೆಚ್ಚು ಹುದ್ದೆಗಳು ಖಾಲಿ! ಕೂಡಲೇ ಅಪ್ಲೈ ಮಾಡಿ

    ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 30,307 ಹೆಚ್ಚು ಹುದ್ದೆಗಳು ಖಾಲಿ! ಕೂಡಲೇ ಅಪ್ಲೈ ಮಾಡಿ

    ಭಾರತೀಯ ರೈಲ್ವೆ ಇಲಾಖೆಯು ದೇಶದ ಯುವಕರಿಗೆ ಮತ್ತೊಂದು ಸುವರ್ಣಾವಕಾಶವನ್ನು ಕಲ್ಪಿಸಿದೆ. ರೈಲ್ವೆ ನೇಮಕಾತಿ ಮಂಡಳಿ (RRB)ಯು 2025ನೇ ಸಾಲಿನ NTPC (Non-Technical Popular Categories) ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬರೋಬ್ಬರಿ 30,307 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ.

    Advertisement

    ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 29 ಕೊನೆಯ ದಿನವಾಗಿರುವುದರಿಂದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಸುವ ವಿಧಾನ, ಮತ್ತು ಇತರೆ ಅಗತ್ಯ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

    ನೇಮಕಾತಿ ಪೂರ್ಣ ವಿವರ

    ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ (RRB)

    ನೇಮಕಾತಿ ಹುದ್ದೆಗಳ ಸಂಖ್ಯೆ: 30,307

    ಉದ್ಯೋಗ ಸ್ಥಳ: ಭಾರತದಾದ್ಯಂತ (Pan-India)

    ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಸೆಪ್ಟೆಂಬರ್ 29, 2025

    ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಮಾತ್ರ

    ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

    ಅರ್ಜಿ ಪ್ರಕ್ರಿಯೆ ಆರಂಭ: 30 ಆಗಸ್ಟ್ 2025

    ಅರ್ಜಿ ಸಲ್ಲಿಕೆ ಕೊನೆ ದಿನ: 29 ಸೆಪ್ಟೆಂಬರ್ 2025

    ರೈಲ್ವೆ ನೇಮಕಾತಿ: ಲಭ್ಯವಿರುವ ಹುದ್ದೆಗಳ ವಿವರ

    ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕರು (Chief Commercial & Ticket Supervisor) 6,235 ಹುದ್ದೆಗಳು ₹35,400/-

    ಸ್ಟೇಷನ್ ಮಾಸ್ಟರ್ (Station Master) – 5,623 ಹುದ್ದೆಗಳು ₹35,400/-

    ಸರಕು ರೈಲು ವ್ಯವಸ್ಥಾಪಕ (Goods Guard) – 3,562 ಹುದ್ದೆಗಳು ₹29,200/-

    ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ & ಟೈಪಿಸ್ಟ್ (JAA & Typist) 7,520 ಹುದ್ದೆಗಳು – ₹29,200/-

    ಹಿರಿಯ ಗುಮಾಸ್ತ & ಬೆರಳಚ್ಚುಗಾರ (Senior Clerk & Typist) 7,367 ಹುದ್ದೆಗಳು ₹29,200/-

    ಈ ಎಲ್ಲಾ ಹುದ್ದೆಗಳು ಅಖಿಲ ಭಾರತ ಮಟ್ಟದಲ್ಲಿ ಇರುವುದರಿಂದ, ಅಭ್ಯರ್ಥಿಗಳು ದೇಶದ ಯಾವ ರಾಜ್ಯದಲ್ಲಿದ್ದರೂ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆ ಮತ್ತು ವಯೋಮಿತಿ

    ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುತ್ತಿರುವ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು, ಅಭ್ಯರ್ಥಿಗಳು ಈ ಕೆಳಗಿನ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು:

    ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ:

    ಕನಿಷ್ಠ ವಯಸ್ಸು: 18 ವರ್ಷ

    ಗರಿಷ್ಠ ವಯಸ್ಸು: 36 ವರ್ಷ

    ವಯೋಮಿತಿ ಪರಿಗಣನೆ ದಿನಾಂಕ: 01-ಜನವರಿ-2025

    ವಯೋಮಿತಿ ಸಡಿಲಿಕೆ: ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ವರ್ಗಗಳು (OBC) ಮತ್ತು ಇತರ ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

    ಆಯ್ಕೆ ಪ್ರಕ್ರಿಯೆ

    RRB ನೇಮಕಾತಿ 2025ರ ಆಯ್ಕೆ ಪ್ರಕ್ರಿಯೆ ಹಂತಗಳು ಹೀಗಿವೆ:

    ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)

    ಸಂದರ್ಶನ / ದಾಖಲೆ ಪರಿಶೀಲನೆ

    ಅರ್ಹ ಅಭ್ಯರ್ಥಿಗಳನ್ನು ಮೆರುಪಟ್ಟಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

    ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ

    ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ:

    ಅಧಿಕೃತ ವೆಬ್‌ಸೈಟ್‌ಗೆ ಭೇಟಿ: ಮೊದಲಿಗೆ, RRB ಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡಿ.

    ಅಧಿಸೂಚನೆ ಓದಿ: ಅರ್ಹತೆ ಮತ್ತು ಇತರ ಅಗತ್ಯ ಮಾಹಿತಿಗಳಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಪರಿಶೀಲಿಸಿ.

    ಆನ್‌ಲೈನ್ ಅರ್ಜಿ ಭರ್ತಿ: ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನಿಮ್ಮ ಸರಿಯಾದ ಮಾಹಿತಿ, ಇಮೇಲ್ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

    ದಾಖಲೆಗಳ ಅಪ್‌ಲೋಡ್: ನಿಮ್ಮ ಅಗತ್ಯ ದಾಖಲೆಗಳಾದ ಗುರುತಿನ ಚೀಟಿ (ID Proof), ಶಿಕ್ಷಣ ಪ್ರಮಾಣಪತ್ರಗಳು, ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.

    ಅರ್ಜಿ ಶುಲ್ಕ ಪಾವತಿ: ಅನ್ವಯಿಸಿದರೆ, ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.

    ಅರ್ಜಿ ಸಲ್ಲಿಸಿ: ಎಲ್ಲ ಮಾಹಿತಿಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಂಡ ನಂತರ, ‘Submit’ ಬಟನ್ ಕ್ಲಿಕ್ ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ನಿಮ್ಮ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಉಳಿಸಿಕೊಳ್ಳಲು ಮರೆಯಬೇಡಿ.

    ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧ: ಕಾರಣವೇನು?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading