Wednesday, September 2, 2026
spot_img
More
    spot_img
    HomeStateDistrictಧರ್ಮಸ್ಥಳ ಕೇಸ್‌ಗೆ ಬಿಗ್‌ ಟ್ವಿಸ್ಟ್:‌ ಬಂಗ್ಲೆಗುಡ್ಡ ಕಾಡಿನಲ್ಲಿ ಗುಂಡಿ ಅಗೆಯುವ ಮುನ್ನವೇ ರಾಶಿ ಮೂಳೆ, ಬಟ್ಟೆಗಳು...

    ಧರ್ಮಸ್ಥಳ ಕೇಸ್‌ಗೆ ಬಿಗ್‌ ಟ್ವಿಸ್ಟ್:‌ ಬಂಗ್ಲೆಗುಡ್ಡ ಕಾಡಿನಲ್ಲಿ ಗುಂಡಿ ಅಗೆಯುವ ಮುನ್ನವೇ ರಾಶಿ ಮೂಳೆ, ಬಟ್ಟೆಗಳು ಪತ್ತೆ!

    ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಗುಂಡಿ ಅಗೆಯುವ ಮುನ್ನವೇ ಒಂದಷ್ಟು ಮೂಳೆಗಳು ಹಾಗೂ ಬಟ್ಟೆ ಪತ್ತೆಯಾಗಿವೆ ಎನ್ನಲಾಗಿದೆ.

    Advertisement

    ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್‌ಐಟಿ ಶೋಧ ನಡೆಸುವಾಗ ಮೂಳೆಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ. ವಿಠಲಗೌಡನನ್ನು ಕರೆತರದೇ ಎಸ್‌ಐಟಿ ಶೋಧ ಕಾರ್ಯ ನಡೆಸುತ್ತಿದ್ದು, ಅಲ್ಲಿ ಸಿಕ್ಕಿರುವ ಮೂಳೆ ಹಾಗೂ ಬಟ್ಟೆಗಳನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

    ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.

    ಧರ್ಮಸ್ಥಳದ ವಿವಿಧೆಡೆ ಹೆಣಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿಸಿತ್ತು. ಈ ನಡುವೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿತ್ತು.

    ಈ ಬೆಳವಣಿಗೆ ನಡುವೆಯೇ ವಿಠಲಗೌಡನ ವಿಡಿಯೋವೊಂದು ವೈರಲ್‌ ಆಗಿದ್ದು, ಬಂಗ್ಲಗುಡ್ಡದಲ್ಲಿ ತಾನು ಹೆಣಗಳ ರಾಶಿ ನೋಡಿದ್ದೇನೆ. ಮೊದಲ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಮೂರು ಅಸ್ಥಿಪಂಜರಗಳನ್ನು ನೋಡಿದ್ದೇನೆ. ಎರಡನೇ ಬಾರಿ ಹೋದಾಗ ಬಂಗ್ಲಗುಡ್ಡದಲ್ಲಿ ಮರದ ಕೆಳಭಾಗದಲ್ಲಿ ಹೆಣಗಳ ರಾಶಿ ಕಂಡಿದ್ದೇನೆ. ನನ್ನ ಕಣ್ಣಿಗೆ ಐದು ಅಸ್ಥಿಪಂಜರಗಳು ಕಂಡಿವೆ. ಅದರ ಬಳಿಯೇ ವಾಮಾಚಾರಕ್ಕೆ ಬಳಸುವ ಕೆಲ ವಸ್ತುಗಳು ಕೂಡ ಇದ್ದವು ಎಂದು ಸ್ಪೋಟಕ ಹೇಳಿಕೆ ನೀಡಿದ್ದನು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಗ್ಲಗುಡ್ಡದಲ್ಲಿ ಮತ್ತೆ ಶೋಧಕಾರ್ಯ ಮುಂದುವರಿಸಿದ್ದಾರೆ.

    ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡೊನಾಲ್ಡ್ ಟ್ರಂಪ್

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading