ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಆದ ಹಿನ್ನೆಲೆ ಜಿಲ್ಲೆಯ ಚಿಂಚೋಳಿ ಮತ್ತು ಸೇಡಂ ತಾಲೂಕಿನ ಕಬ್ಬು ಬೆಳೆಗಾರರು ಕಂಗಾಲಾಗಿದ್ದರು. ಸದ್ಯ ಈ ಭಾಗದ ರೈತರ ನೆರವಿಗೆ ಕಲಬುರಗಿ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್ ಧಾವಿಸಿದ್ದಾರೆ.
ಸರ್ಕಾರ ಹಾಗೂ ಬಿಜೆಪಿ ನಡುವಿನ ಕಿತ್ತಾಟದಿಂದ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಪುನರಾರಂಭವಾಗುತ್ತಿಲ್ಲ. ಕಾರ್ಖಾನೆ ಆರಂಭವಾಗದ ಕಾರಣ ಸಾವಿರಾರು ಎಕರೆ ಕಬ್ಬು ಬೆಳೆದಿದ್ದ ರೈತರು ಕಂಗಾಲಾಗಿದ್ದರು.
ಆದರೆ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್ ಮಾಡಿದ ಉಪಾಯದಿಂದ ರೈತರ ಸಮಸ್ಯೆ ದೂರಾಗಿದೆ. ಚಿಂಚೋಳಿ ಹಾಗೂ ಸೇಡಂ ತಾಲೂಕಿನ ರೈತರು ಒಟ್ಟು 3000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬನ್ನು ಡಿಸಿ ಪೌಜಿಯಾ ಅವರು ಸರ್ವೇ ಮಾಡಿಸಿ ಬಳಿಕ ಕಾರ್ಖಾನೆ ಜೊತೆ ಒಪ್ಪಂದ ಮಾಡಿಸಿದ್ದಾರೆ. ನಂತರ ಎರಡೂ ತಾಲೂಕಿನ ರೈತರು ಬೆಳೆದ ಕಬ್ಬನ್ನು ಸಮೀಪದ ಕೆಪಿಆರ್ ಸಕ್ಕರೆ ಕಾರ್ಖಾನೆ ಹಾಗೂ ಬೀದರ್ನ ಕಿಸಾನ್ ಸಕ್ಕರೆ ಕಾರ್ಖಾನೆಗೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


