Saturday, August 8, 2026
spot_img
More
    spot_img
    HomeTop Storyಬೆಂಗಳೂರು: ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

    ಬೆಂಗಳೂರು: ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

    ಬೆಂಗಳೂರು: ಹಣ ಪಡೆದು ವಂಚಿಸಿದ್ದಲ್ಲದೇ ನನ್ನ ಮೇಲೆ ಹಲ್ಲೆನಡೆಸಿ ಕಿರುಕುಳ ನೀಡಿರುವರ ಬಗ್ಗೆ ಫೇಸ್‍ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತರೊಬ್ಬರು ಇಲ್ಲಿನ ಖಾಸಗಿ ಶಾಲೆ ಬಳಿಯ ಮರಕ್ಕೆ ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಅನೇಕಲ್ ನಲ್ಲಿ ನಡೆದಿದೆ.

    Advertisement

    ಪ್ರವೀಣ್ ಗೌಡ ಬೇಲೂರು (35) ಆತಹತ್ಯೆಗೆ ಶರಣಾದ ಯುವಕ. ಆತಹತ್ಯೆಗೂ ಮುನ್ನ ನನ್ನ ಸಾವಿಗೆ ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ಕಾರಣಕರ್ತರು ಎಂದು ವೀಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

    ಫೇಸ್‍ಬುಕ್‍ನಲ್ಲಿ ತಮಗಾದ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದು, ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ಯಾರನ್ನೂ ಬಿಟ್ಟರೂ ಕಿರಣ್ ಗೌಡನನ್ನು ದಯವಿಟ್ಟು ಬಿಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಕಿರಣ್ ತುಂಬಾ ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಾನೆ. ಇವನು ಮಾಡಿರುವ ಅನಾಚಾರ ನನ್ನ ಮೇಲೆ ಬಂದಿದೆ. ನಾನು ನೀಡಿದ್ದ ಹಣ ಕೊಡುವುದಾಗಿ ಹೇಳಿ ಮಾತುಕತೆಗೆ ಕರೆಸಿಕೊಂಡು ಮನಬಂದಂತೆ ಹಲ್ಲೆ ನಡೆಸಿರುವ ಬಗ್ಗೆಯೂ ವಿಡಿಯೋದಲ್ಲಿ ಆರೋಪಿಸಿದ್ದಾರೆ.

    Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading