Wednesday, September 2, 2026
spot_img
More
    spot_img
    HomeTop StoryFact Check: ಬೆಂಗಳೂರಿನಲ್ಲಿ 2 ದಿನ ನೀರು ಇರಲ್ವಂತೆ; ಹರಿದಾಡುತ್ತಿರುವ ಈ ಸುದ್ದಿ ಎಷ್ಟು ನಿಜ?

    Fact Check: ಬೆಂಗಳೂರಿನಲ್ಲಿ 2 ದಿನ ನೀರು ಇರಲ್ವಂತೆ; ಹರಿದಾಡುತ್ತಿರುವ ಈ ಸುದ್ದಿ ಎಷ್ಟು ನಿಜ?

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬೆಳಗ್ಗೆಯಿಂದ ಬೆಂಗಳೂರು ನಗರದಲ್ಲಿ ಜೂನ್‌ 19 ಹಾಗೂ ಜೂನ್‌ 20ರಂದು ನೀರಿನ ಪೂರೈಕೆ ಸ್ಥಗಿತ ಎಂಬ ಮಾತುಗಳು ಕೇಳಿಬರುತ್ತಿವೆ.

    Advertisement

    ಕೋಟ್ಯಂತರ ಜನರಿರುವ ನಗರದಲ್ಲಿ ಎರಡು ದಿನಗಳು ಸಂಪೂರ್ಣ ನೀರು ಸ್ಥಗಿತವೆಂದರೆ ಹೇಗೆ ಎಂದು ಹಲವಾರು ಮಂದಿ ಇದನ್ನು ಗಾಳಿ ಸುದ್ದಿ ಎಂದೇ ಕಡೆಗಣಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿರುವ ಈ ಸುದ್ದಿ ನಿಜ. ಸ್ವತಃ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಈ ಕುರಿತು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದೆ.

    ತುರ್ತು ಕಾಮಗಾರಿ ನಡೆಯಲಿರುವ ಹಿನ್ನಲೆಯಲ್ಲಿ ಜೂ.19ರ ಗುರುವಾರ ಬೆಳಿಗ್ಗೆ 6 ರಿಂದ ಜೂ.20ರ ಶುಕ್ರವಾರ ಬೆಳಿಗ್ಗೆ 6 ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾವೇರಿ ನೀರಿನ ಪೂರೈಕೆ ಇರುವುದಿಲ್ಲ, ಸಾರ್ವಜನಿಕರು ಅಗತ್ಯ ನೀರಿನ ಸಂಗ್ರಹಣೆ ಮಾಡಿಕೊಂಡು ಮಂಡಳಿಗೆ ಸಹಕರಿಸಿ ಎಂದು ಮನವಿ ಮಾಡಿಕೊಂಡಿದೆ.

    ಹೀಗಾಗಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ಆದಷ್ಟು ನೀರನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading