ಬೆಂಗಳೂರು ಹೆಬ್ಬಾಳದ ಬಹುನಿರೀಕ್ಷಿತ ವಿಸ್ತರಿತ ಮೇಲ್ಸೇತುವೆಯನ್ನು ಇಂದು ಬೆಳಗ್ಗೆ 11 ಗಂಟೆಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಅನ್ನು ಉದ್ಘಾಟಿಸಲಿದ್ದಾರೆ. . ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದ್ದು, ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ನೇರವಾಗಿ ರ್ಯಾಂಪ್ ಮೂಲಕ ಸಂಚರಿಸಲು ಈ ಫ್ಲೈಓವರ್ ಸಹಾಯ ಮಾಡಲಿದೆ. ಆದರೆ, ಟ್ರಯಲ್ ಸಮಯದಲ್ಲಿ ಮೇಖ್ರಿ ಸರ್ಕಲ್ ಬಳಿ ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ.
700 ಮೀಟರ್ ಉದ್ದದ ಈ ಫ್ಲೈಓವರ್ ಸುಮಾರು ₹80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, 2023ರಲ್ಲಿ ಪ್ರಾರಂಭವಾದ ಕಾಮಗಾರಿ ಒಂದೂವರೆ ವರ್ಷಗಳಲ್ಲಿ ಪೂರ್ಣಗೊಂಡಿದೆ. ಕೆ.ಆರ್.ಪುರಂನಿಂದ ಮೇಖ್ರಿ ಸರ್ಕಲ್ವರೆಗೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆ, ಬಳ್ಳಾರಿ ರಸ್ತೆ, ವಿಮಾನ ನಿಲ್ದಾಣ ಹಾಗೂ ಹೊರ ಜಿಲ್ಲೆ-ರಾಜ್ಯಗಳಿಗೆ ಸಂಚಾರ ಸುಗಮಗೊಳಿಸಲಿದೆ.
ನಾಗವಾರದಿಂದ ಬರುವ ವಾಹನಗಳು ರ್ಯಾಂಪ್ ಮೂಲಕ ಸುಲಭವಾಗಿ ಸಂಚರಿಸಬಹುದಾಗಿದೆ. ಇದರ ಪರಿಣಾಮವಾಗಿ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ಆದರೆ, ಟ್ರಯಲ್ ರನ್ ವೇಳೆ ಮೇಖ್ರಿ ಸರ್ಕಲ್ನಲ್ಲಿ ಜಾಮ್ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ.
ಹೆಬ್ಬಾಳ ಫ್ಲೈಓವರ್ ಬಳ್ಳಾರಿ ರಸ್ತೆ, ವಿಮಾನ ನಿಲ್ದಾಣ ಮತ್ತು ಹೊರ ಜಿಲ್ಲೆ-ರಾಜ್ಯಗಳಿಗೆ ಉತ್ತಮ ಸಂಪರ್ಕ ಕಲ್ಪಿಸುವ ಮೂಲಕ ಸಂಚಾರ ಸುಗಮಗೊಳಿಸುತ್ತದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಟ್ರಾಫಿಕ್ ದಟ್ಟಣೆ ಸಮಸ್ಯೆ ಬಹು ಮಟ್ಟಿಗೆ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಉದ್ಘಾಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ತೀವ್ರ ಶೋಧ ಕಾರ್ಯಾಚರಣೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


