ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಆರೋಪಿಸಿರುವ ಅನಾಮಿಕ ವ್ಯಕ್ತಿಯೊಬ್ಬ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ರಚಿಸಿದ್ದು, ತನಿಖೆ ನಡೆಯುತ್ತಿದೆ.
ಅನಾಮಿಕ ದೂರುದಾರ 17 ಸ್ಥಳಗಳನ್ನು ಗುರುತಿಸಿದ್ದು, ಎಲ್ಲೆಡೆ ಉತ್ಖನನ ಕಾರ್ಯ ನಡೆದಿದೆ. ಇನ್ನು ಎಸ್ಐಟಿ ತನಿಖೆ ಮೂರು ವಾರಗಳ ಕಾಲ ನಡೆಯುತ್ತಿದ್ದಂತೆ ಬಿಜೆಪಿ ಶಾಸಕರು ಸರ್ಕಾರದಿಂದ ಎಸ್ಐಟಿ ಮಧ್ಯಂತರ ವರದಿಗೆ ಆಗ್ರಹಿಸಿದರು.
ಅದರಂತೆ ಇಂದು ( ಆಗಸ್ಟ್ 18 ) ಗೃಹ ಸಚಿವ ಜಿ. ಪರಮೇಶ್ವರ್ ಎಸ್ಐಟಿ ಮಧ್ಯಂತರ ವರದಿಯನ್ನು ಬಹಿರಂಗಪಡಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು.
ಆದರೆ ಪರಮೇಶ್ವರ್ ಎಸ್ಐಟಿ ಅಧಿಕಾರಿಗಳು ಇನ್ನೂ ಯಾವುದೇ ಮಧ್ಯಂತರ ವರದಿಯನ್ನು ಸಲ್ಲಿಸಿಲ್ಲ, ನಮಗೆ ಇಂತಹ ಸಮಯಕ್ಕೆ ವರದಿ ಬೇಕು ಎಂದು ಅವರನ್ನು ಕೇಳುವ ಹಾಗಿಲ್ಲ. ಅವರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಸಂಪೂರ್ಣ ತನಿಖೆ ಮುಗಿದ ಬಳಿಕ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಅಲ್ಲದೇ ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಸತ್ಯ ಹೊರಬರುವ ತನಕ ವಿರೋಧ ಪಕ್ಷದವರು ತಾಳ್ಮೆಯಿಂದ ಇರಬೇಕು. ತನಿಖೆ ಮುಗಿದ ಬಳಿಕ ಸತ್ಯ ಹೊರಬರಲಿದೆ ಎಂದು ಹೇಳಿದರು.
ಧರ್ಮಸ್ಥಳದ ಕುರಿತ ಅಪಪ್ರಚಾರ ತಡೆಯಲು ರಾಜ್ಯ ಸರ್ಕಾರಕ್ಕೆ ಇಷ್ಟ ಇಲ್ವಾ?; ವಿಜಯೇಂದ್ರ ಕಿಡಿ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


