ನವದೆಹಲಿ: ಮತದಾರರ ಪಟ್ಟಿಯನ್ನು ಕಾಂಗ್ರೆಸ್ ಬೆಂಬಲಿತ ಮತದಾರರನ್ನು ಡಿಲಿಟ್ ಮಾಡಿರುವುದು ಹಾಗೂ ಬೇರೆಯವರನ್ನು ಸೇರ್ಪಡೆ ಮಾಡಿರುವುದಕ್ಕೆ ತಮ ಕ್ಷೇತ್ರದಲ್ಲಿ ಸಂಪೂರ್ಣ ಸಾಕ್ಷ್ಯ ಇದೆ ಎಂದು ಅಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಚುನಾವಣಾ ಅಧಿಕಾರಿಯೇ ದೂರು ನೀಡಿದ್ದಾರೆ. ಅದನ್ನು ತನಿಖೆ ನಡೆಸಲು ಆಯೋಗ ನಿರಾಕರಿಸಿತ್ತು. ನಾವು ಬಿಡದೆ ಬೆನ್ನತ್ತಿದ್ದು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಅಧಿಕಾರಿಗಳು 18 ಬಾರಿ ಪತ್ರ ಬರೆದರು, ಈವರೆಗೂ ಆಯೋಗದ ಅಧಿಕಾರಿಗಳು ಉತ್ತರ ನೀಡಿಲ್ಲ ಎಂದು ಆಕ್ಷೇಪಿಸಿದರು.
ಮತಗಳ್ಳತನದ ಬಗ್ಗೆ ನಮಗೆ ಮಾಹಿತಿ ಸಿಗುತ್ತಿದ್ದಂತೆ ತಕ್ಷಣವೇ ಚುನಾವಣಾ ಆಯೋಗಕ್ಕೆ ದೂರು ನೀಡಿ ಪ್ರತಿಭಟಿಸಿದ್ದರಿಂದಾಗಿ ಹೆಚ್ಚಿನ ಹಾನಿಯಾಗುವುದು ತಪ್ಪಿದೆ. ಇಲ್ಲವಾದರೆ ನಾನು ಸೋಲಬೇಕಿತ್ತು ಎಂದಿದ್ದಾರೆ.
ಮತದಾರರ ಪಟ್ಟಿಯ ಅಕ್ರಮದ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಯೇ ದೂರು ನೀಡಿದ್ದರು. ತನಿಖೆಗೆ ಸಹಕರಿಸದೇ ಇರುವುದು ಹಲವು ಅನುಮಾನಗಳನ್ನು ಮೂಡಿಸಿದೆ ಎಂದು ಆರೋಪಿಸಿದರು.
ತಮ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿಯ ಮತದಾರರ ಹೆಸರನ್ನೇ ಕೈ ಬಿಡಲಾಗಿದೆ. ಕಾಂಗ್ರೆಸ್ನ ಮತದಾರರು ಎಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೋ ಅಲ್ಲಿ ಪಟ್ಟಿಯಿಂದ ಕೈಬಿಡುವ ಪ್ರಯತ್ನಗಾಳಾಗಿವೆ ಎಂದು ಬಿ.ಆರ್.ಪಾಟೀಲ್ ಆರೋಪಿಸಿದರು.
ಸ್ವಿಗ್ಗಿಯಿಂದ ಮತ್ತೊಂದು ಡೆಲಿವರಿ ಆ್ಯಪ್ ಲಾಂಚ್; ಕೇವಲ 99 ರೂಗೆ ಊಟ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


