Saturday, July 4, 2026
spot_img
More
    spot_img
    HomeStateDistrictವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

    ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.

    Advertisement

    ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ‌ನೆರವೇರಿತು.

    ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.

    ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.

    ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.

    2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ‍ಧರ್ಮಸ್ಥಳ: ಎರಡನೇ ದಿನವೂ ಬಂಗ್ಲೆಗುಡ್ಡದಲ್ಲಿ ಬುರುಡೆಗಳು ಪತ್ತೆ; ತನಿಖೆ ವಿರೋಧಿಗಳು ಕಂಗಾಲು!

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading